Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...