Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...