Homeಮುಖಪುಟ’ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ’ -ರಾಹುಲ್ ಗಾಂಧಿ

’ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ’ -ರಾಹುಲ್ ಗಾಂಧಿ

1948 ರಲ್ಲಿ ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿ.10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ.

- Advertisement -
- Advertisement -

ಇಂದು ಡಿಸೆಂಬರ್‌ 10 ವಿಶ್ವ ಮಾನವ ಹಕ್ಕುಗಳ ದಿನಾಚರಣೆ. ದೇಶದಾದ್ಯಂತ ಮಾನವ ಹಕ್ಕುಗಳ ಮೇಲೆ ನಡೆದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಕ್ಕುಗಳ ರಕ್ಷಣೆ ಬಗ್ಗೆ ಗಮನ ಸೆಳೆಯುತ್ತಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಗಮನದಲ್ಲಿರಿಸಿಕೊಂಡು ಟ್ವೀಟ್ ಮಾಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯು 15ನೇ ದಿನಕ್ಕೆ ಕಾಲಿಟ್ಟಿದೆ. ಇದರ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರ ಬಡವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

‘ಇದು ಮಾನವೀಯತೆಯ ವಿರುದ್ಧದ ಅಪರಾಧ.  ದೇಶದ ಉತ್ತಮ ಭವಿಷ್ಯಕ್ಕಾಗಿ, ನಾವು ಎಲ್ಲಾ ವರ್ಗದ ಜನರ ಹಕ್ಕುಗಳನ್ನು ಗೌರವಿಸಬೇಕಾಗಿದೆ’ ಎಂದು #HumanRightsDay ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಜೊತೆಗೆ, ಪತ್ರಿಕೆಯ ವರದಿಯೊಂದನ್ನು ಹಂಚಿಕೊಂಡಿದ್ದಾರೆ. ವರದಿಯಲ್ಲಿ ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಏಕಾಏಕಿ ಹೇಳಿದ ಲಾಕ್‌ಡೌನ್‌ನಿಂದಾಗಿ ಜನ ಆಹಾರಕ್ಕಾಗಿ ಸಾಲ ಪಡೆಯಬೇಕಾಗಿದರ ಕುರಿತ ವರದಿಯಿದೆ.

ಇದರಿಂದ ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು ಆಹಾರದ ಸಂಪೂರ್ಣ ಖರೀದಿ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಇದು ದೇಶದ ಹಸಿವಿನ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ವರದಿ ಮಾಹಿತಿ ಬಿಚ್ಚಿಡುತ್ತದೆ.

ಲಾಕ್ ಡೌನ್ ಸಮಯದಲ್ಲಿ ದೇಶದ 11 ರಾಜ್ಯಗಳಲ್ಲಿ ಸುಮಾರು 45 ಪ್ರತಿಶತದಷ್ಟು ಜನರು ಆಹಾರಕ್ಕಾಗಿ ಸಾಲ ತೆಗೆದುಕೊಳ್ಳಬೇಕಾಗಿತ್ತು ಎಂದು ಹಂಗರ್ ವಾಚ್‌ನ ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಇದೇ ವರದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ – ಬಿಜೆಪಿ ಮುಖಂಡ

1948 ರಲ್ಲಿ ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯನ್ನು (UDHR) ಅಂಗೀಕರಿಸಿದ ನೆನಪಿಗಾಗಿ ಪ್ರತಿವರ್ಷ ಡಿಸೆಂಬರ್ 10 ರಂದು ಮಾನವ ಹಕ್ಕುಗಳ ದಿನವನ್ನಾಗಿ ಆಚರಿಸಲಾಗುತ್ತದೆ.

Human Rights Day 2020 human rights day history significance and theme - NewsBust.in

ವಿಶ್ವಸಂಸ್ಥೆಯ ಪ್ರಕಾರ, ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯು ಜನಾಂಗ, ಬಣ್ಣ, ಧರ್ಮ, ಲಿಂಗ, ಭಾಷೆ, ರಾಜಕೀಯ ಅಥವಾ ಇತರ ಅಭಿಪ್ರಾಯ, ಜನನ ರಾಷ್ಟ್ರೀಯತೆ ಅಥವಾ ಸಾಮಾಜಿಕ ಮೂಲ, ಆಸ್ತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ಮನುಷ್ಯನಿಗೆ ಅರ್ಹವಾದ ಹಕ್ಕುಗಳನ್ನು ಘೋಷಿಸುವ ಒಂದು ದಾಖಲೆಯಾಗಿದೆ. ಇದು 500 ಕ್ಕೂ ಹೆಚ್ಚು ಭಾಷೆಗಳಲ್ಲಿ ಲಭ್ಯವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವದಲ್ಲಿ ನಡೆದ ಜಾತಿ, ಧರ್ಮ, ಮಹಿಳೆ, ದೇಶಗಳ ಆಧಾರದಲ್ಲಿ ಅನೇಕ ದೌರ್ಜನ್ಯಗಳು ನಡೆದಿದ್ದು, ಅವುಗಳ ಚಿತ್ರಣವನ್ನು ನೆನಪಿಸುತ್ತಾ ಹಲವು ಮಂದಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದಾರೆ. ಈ ಮೂಲಕ ಇನ್ನಾದರೂ ಮಾನವ ಹಕ್ಕುಗಳನ್ನು ರಕ್ಷಿಸಿ ಎಂದು ಮನವಿ ಮಾಡುತ್ತಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...