Homeಮುಖಪುಟ2 ಕೋಟಿ ಉದ್ಯೋಗಗಳ ಸುಳ್ಳು ಭರವಸೆ ನೀಡಿದ್ದ ಮೋದಿ ಸರ್ಕಾರ, 2 ಲಕ್ಷಕ್ಕೂ ಅಧಿಕ ಉದ್ಯೋಗ...

2 ಕೋಟಿ ಉದ್ಯೋಗಗಳ ಸುಳ್ಳು ಭರವಸೆ ನೀಡಿದ್ದ ಮೋದಿ ಸರ್ಕಾರ, 2 ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತಗೊಳಿಸಿದೆ: ರಾಹುಲ್ ವಾಗ್ದಾಳಿ

- Advertisement -
- Advertisement -

ಭಾರತದಲ್ಲಿ ಉದ್ಯೋಗಗಳು ಕಡಿಮೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತದಲ್ಲಿ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ (ಪಿಎಸ್‌ಯು) ಕಳೆದ ಒಂದು ದಶಕದಲ್ಲಿ ಉದ್ಯೋಗದಲ್ಲಿ ಕುಸಿತ ಕಂಡಿವೆ ಎಂದು ವರದಿಗಳು ಸೂಚಿಸಿದ ಕೆಲವೇ ಗಂಟೆಗಳ ನಂತರ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು (ಪಿಎಸ್‌ಯು) ನಿರ್ಲಕ್ಷಿಸುತ್ತಿದೆ. ಎರಡು ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದೇ ವೇಳೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ಬಿಜೆಪಿ ನಾಯಕರ ಹಿಂದಿನ ಭರವಸೆಗಳನ್ನು ರಾಹುಲ್ ನೆನಪಿಸಿಕೊಂಡರು.

“ಇದು ನಿಜವಾಗಿಯೂ ‘ಅಮೃತ ಕಾಲ’ ಆಗಿದ್ದರೆ ಉದ್ಯೋಗಗಳು ಏಕೆ ಈ ರೀತಿ ಕಣ್ಮರೆಯಾಗುತ್ತಿವೆ? ಈ ಸರ್ಕಾರದ ಅಡಿಯಲ್ಲಿ ದೇಶವು ದಾಖಲೆಯ ನಿರುದ್ಯೋಗದಿಂದ ನಲುಗುತ್ತಿದೆ. ಕೆಲವು ಬಂಡವಾಳಶಾಹಿ ಸ್ನೇಹಿತರ ಲಾಭಕ್ಕಾಗಿ ಲಕ್ಷಾಂತರ ಯುವಕರ ಕನಸನ್ನು ಭಗ್ನಗೊಳಿಸಲಾಗಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ದೇಶದ ಪಿಎಸ್‌ಯುಗಳಲ್ಲಿ ಉದ್ಯೋಗಾವಕಾಶವು 2014ರಲ್ಲಿ 16.9 ಲಕ್ಷದಿಂದ 2022ರಲ್ಲಿ 14.6 ಲಕ್ಷಕ್ಕೆ ಇಳಿಕೆಯಾಗಿದೆ. ಪ್ರಗತಿಪರ ದೇಶದಲ್ಲಿ ಉದ್ಯೋಗಗಳು ಕಡಿಮೆಯಾಗಿವೆಯೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ ಅವರು, 2 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿಮೆ ಮಾಡಿರುವ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪಿಎಸ್‌ಯುನಲ್ಲಿ ಉದ್ಯೋಗ ಕಡಿತಕ್ಕೆ ಸಂಬಂಧಿಸಿದಂತೆ ರಾಹುಲ್ ನೀಡಿರುವ ಪಟ್ಟಿ:

ಬಿಎಸ್‌ಎನ್‌ಎಲ್‌: 1,81,127

ಸೇಲ್‌ (SAIL): 61,928

ಎಂಟಿಎನ್‌ಎಲ್: 34,997

ಎಸ್‌ಇಎಸ್‌ಎಲ್: 29,140

ಎಫ್‌ಸಿಐ: 28,063

ಒಎನ್‌ಜಿಸಿ: 21,120

”ಭಾರತದ ಪಿಎಸ್‌ಯುಗಳಿಗೆ ಸರ್ಕಾರ ಬೆಂಬಲ ನೀಡಿದರೆ ಅವು ಆರ್ಥಿಕತೆ ಮತ್ತು ಉದ್ಯೋಗ ಎರಡನ್ನೂ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿವೆ. ಪಿಎಸ್‌ಯುಗಳು ದೇಶದ ಮತ್ತು ದೇಶವಾಸಿಗಳ ಆಸ್ತಿಯಾಗಿದ್ದು, ಭಾರತದ ಪ್ರಗತಿಯ ಹಾದಿಯನ್ನು ಬಲಪಡಿಸಲು ಅವುಗಳನ್ನು ಉತ್ತೇಜಿಸಬೇಕು” ಎಂದು ರಾಹುಲ್ ಹೇಳಿದರು.

ಪಿಎಸ್‌ಯುಗಳಲ್ಲಿ ಗುತ್ತಿಗೆ ನೇಮಕಾತಿಯನ್ನು ಹೆಚ್ಚಿಸುವ ಮತ್ತು ಆ ಮೂಲಕ ಮೀಸಲಾತಿಯ ಹಕ್ಕನ್ನು ಕಸಿದುಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಅವರು ಸರ್ಕಾರವನ್ನು ಟೀಕಿಸಿದರು.

”ಇದು ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪಿತೂರಿಯೇ? ಕೈಗಾರಿಕೋದ್ಯಮಿಗಳ ಸಾಲ ಮನ್ನಾ, ಮತ್ತು ಪಿಎಸ್‌ಯುಗಳಿಂದ ಸರ್ಕಾರಿ ಉದ್ಯೋಗಗಳನ್ನು ತೆರವುಗೊಳಿಸುವುದು! ಇದು ಯಾವ ರೀತಿಯ ಅಚ್ಛೆ ದಿನ್?” ಎಂದು ಪ್ರಶ್ನೆ ಮಾಡಿದರು.

ಪ್ರಧಾನಿ ಮೋದಿ ಸರ್ಕಾರವು ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳ ಸುಳ್ಳು ಭರವಸೆಯನ್ನು ನೀಡಿದೆ. ಆದರೆ ಭರವಸೆ ಈಡೇರಿಸುವ ಬದಲು ಎರಡೂ ಲಕ್ಷಕ್ಕೂ ಅಧಿಕ ಉದ್ಯೋಗ ಕಡಿತಗೊಳಿಸಲಾಗಿದೆ ಎಂದು ರಾಹುಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಟ್ವಿಟರ್‌ ಬ್ಯಾನ್, ಉದ್ಯೋಗಿಗಳ ಮನೆಗಳ ಮೇಲೆ ದಾಳಿ’ ಮಾಡುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು- ಇದು ಪ್ರಜಾಪ್ರಭುತ್ವ ರಾಷ್ಟ್ರ: ಮಾಜಿ CEO ಡಾರ್ಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...