Homeಮುಖಪುಟಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

ಮೋದಿ ಆಡಳಿತದಲ್ಲಿ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ: ಕಾಂಗ್ರೆಸ್‌

- Advertisement -
- Advertisement -

ಆರ್ಥಿಕ ಬೆಳವಣಿಗೆ ಎಂದರೆ ಕೃಷಿ, ಕೈಗಾರಿಕೆಗಳಲ್ಲಿ ಉದ್ಯೋಗವನ್ನು ಹೆಚ್ಚಿಸುವುದು, ಈ ದಿಸೆಯಲ್ಲಿ ಮನಮೋಹನ್ ಸಿಂಗ್ ಅವರ ಪ್ರಧಾನಿಯಾಗಿ ಸಾಧಿಸಿದ ಪ್ರಗತಿಯನ್ನು ನರೇಂದ್ರ ಮೋದಿ ಸರ್ಕಾರ ಹಿಮ್ಮುಖಗೊಳಿಸಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿಯನ್ನು ನಡೆಸಿದ್ದು, ಮೋದಿ ಸರಕಾರದ ” ಅಸಮರ್ಪಕ ನಿರ್ವಹಣೆಯು” ಆರ್ಥಿಕ ಅಭಿವೃದ್ಧಿಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ಕಾಂಗ್ರೆಸ್‌ ಪಕ್ಷ ಆರೋಪಿಸಿದೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿದ್ದು, 2004-05 ಮತ್ತು 2017-18 ರ ನಡುವೆ ಭಾರತದಲ್ಲಿ ಕೃಷಿ ಕಾರ್ಮಿಕರ ಸಂಖ್ಯೆ 6.7 ಕೋಟಿ ಕಡಿಮೆಯಾಗಿದೆ, ಏಕೆಂದರೆ ಕಾರ್ಮಿಕರು ಕಡಿಮೆ-ವೇತನದ ಕೃಷಿಯನ್ನು ತೊರೆದು ಉತ್ಪಾದನೆ ಮತ್ತು ಸೇವೆಗಳಲ್ಲಿ ಹೆಚ್ಚಿನ ವೇತನದ ಉದ್ಯೋಗಗಳನ್ನು ಹುಡುಕುತ್ತಾರೆ. ಇದು ಐತಿಹಾಸಿಕ ಸಾಧನೆಯಾಗಿದೆ, ಮಧ್ಯಮ ಆದಾಯದ ದೇಶಕ್ಕೆ ಭಾರತದ ಆರ್ಥಿಕ ಪರಿವರ್ತನೆಯಲ್ಲಿ ಪ್ರಮುಖ ಹೆಗ್ಗುರುತಾಗಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ ಸಾಧಿಸಿದ ಎಲ್ಲಾ ಪ್ರಗತಿಯು ಮೋದಿಯವರ ಅನ್ಯಾಯ ಕಾಲದ ಮೂರು ವರ್ಷಗಳಲ್ಲಿ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ. 2018-19 ರಿಂದ ಕೃಷಿ ಕಾರ್ಮಿಕರ ಸಂಖ್ಯೆ 6 ಕೋಟಿಗಳಷ್ಟು ಹೆಚ್ಚಾಗಿದೆ ಎಂದು ಜೈರಾಮ್‌ ರಮೇಶ್ ಹೇಳಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ 10 ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಲು ಮುಂದಾಗಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ಕಳೆದ 10 ವರ್ಷಗಳಲ್ಲಿನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅನ್ಯಾಯಗಳನ್ನು ಎತ್ತಿ ತೋರಿಸುವ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಕುರಿತ ಕಪ್ಪು ಪತ್ರವನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು  ಪತ್ರವನ್ನು ಬಿಡುಗಡೆ ಮಾಡಿದ್ದಾರೆ. “10 ಸಾಲ್‌ ಅನ್ಯಾಯ್‌ ಕಾಲ್” (10 ವರ್ಷ ಅನ್ಯಾಯದ ಕಾಲ) ಎಂಬ ಶೀರ್ಷಿಕೆಯ ಈ ಕಪ್ಪು ಪತ್ರವು 54 ಪುಟಗಳ ದಾಖಲೆಯನ್ನು ಹೊಂದಿದೆ. ಮೋದಿ ಸರ್ಕಾರವು ತನ್ನ 10 ವರ್ಷಗಳ ಅಧಿಕಾರದಲ್ಲಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ, ನಿರುದ್ಯೋಗ ಉಲ್ಭಣಕ್ಕೆ ಕಾರಣವಾಗಿದೆ, ದೇಶದ ಕೃಷಿ ಕ್ಷೇತ್ರವನ್ನು ನಾಶಪಡಿಸಿದೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕುಮ್ಮಕ್ಕು ನೀಡಿದೆ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಘೋರ ಅನ್ಯಾಯವನ್ನು ಮಾಡಿದೆ ಎಂದು ಹೇಳಿತ್ತು.

ಭಾರತವನ್ನು ಸಮೃದ್ಧಿಯ ಹಾದಿಯಲ್ಲಿ ಕೊಂಡೊಯ್ಯುವ ಬದಲು, ಪ್ರಧಾನಿಯವರ ಪ್ರಮಾದ ಮತ್ತು ದುರಾಡಳಿತವು ನಮ್ಮ ಆರ್ಥಿಕ ಪರಿವರ್ತನೆಯನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದೆ ಎಂದು ರಮೇಶ್ ಆರೋಪಿಸಿದರು. ಮೋದಿ ಸರಕಾರ ಆರ್ಥಿಕತೆಯನ್ನು ನಿಭಾಯಿಸುವ ರೀತಿಯ ಬಗ್ಗೆ ಕಾಂಗ್ರೆಸ್‌ ನಿರಂತವಾಗಿ ವಾಗ್ಧಾಳಿಯನ್ನು ನಡೆಸುತ್ತಿದೆ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

ಇದನ್ನು ಓದಿ: ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...