Homeಅಂತರಾಷ್ಟ್ರೀಯಭಾರತ ಚೀನಾ ಗಡಿ ವಿವಾದ: ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿಲ್ಲ - ಭಾರತ ಸ್ಪಷ್ಟನೆ

ಭಾರತ ಚೀನಾ ಗಡಿ ವಿವಾದ: ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿಲ್ಲ – ಭಾರತ ಸ್ಪಷ್ಟನೆ

ಭಾರತ ಚೀನಾ ಗಡಿ ವಿವಾದದ ಕುರಿತಾಗಿ ನಾನು ಮೋದಿ ಜತೆಗೆ ಮಾತನಾಡಿದ್ದೇನೆ; ಚೀನಾ ಜತೆಗಿನ ಸಂಘರ್ಷ ವಿಚಾರದಲ್ಲಿ ಅವರು ಒಳ್ಳೆಯ ಮೂಡ್‌ನಲ್ಲಿ ಇದ್ದಂತಿಲ್ಲ ಎಂದು ಅವರು ಹೇಳಿದ್ದರು.

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಚೀನಾ ಗಡಿ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ, ಭಾರತ ಸರ್ಕಾರದ ಉನ್ನತ ಮೂಲಗಳು ಇದನ್ನು ನಿರಾಕರಿಸಿದೆ. ಈ ನಡುವೆ ಇಬ್ಬರು ನಾಯಕರು ಯಾವುದೇ ಸಂವಹನ ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ.

“ಪ್ರಧಾನಿ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಟ್ರಂಪ್ ನಡುವೆ ಇತ್ತೀಚಿಗೆ ಯಾವುದೇ ಸಂಪರ್ಕಗಳು ನಡೆದಿಲ್ಲ. 2020 ರ ಏಪ್ರಿಲ್ 4 ರಂದು ಹೈಡ್ರಾಕ್ಸಿಕ್ಲೋರೋಕ್ವಿನ್ ವಿಷಯದ ಬಗ್ಗೆ ನಡುವೆ ನಡೆದ ಸಂಭಾಷಣೆಯೆ ಕೊನೆಯದು” ಎಂದು ಮೂಲಗಳು ತಿಳಿಸಿವೆ

“ವಿದೇಶಾಂಗ ಸಚಿವಾಲಯವು ರಾಜತಾಂತ್ರಿಕ ಕಾರ್ಯವಿಧಾನಗಳ ಮೂಲಕ ನೇರವಾಗಿ ಚೀನಾದೊಂದಿಗೆ ಸಂಪರ್ಕದಲ್ಲಿದೆ” ಎಂದು ಮೂಲಗಳು ಹೇಳಿದೆ.

ಉಭಯ ರಾಷ್ಟ್ರಗಳ ನಡುವೆ ನಡೆಯುತ್ತಿರುವುದು “ದೊಡ್ಡ ಸಂಘರ್ಷ” ಎಂದು ಬಣ್ಣಿಸಿರುವ ಟ್ರಂಪ್ ಭಾರತ ಮತ್ತು ಚೀನಾ ನಡುವೆ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಇಂದು ಸಹ ಪುನರುಚ್ಚರಿಸಿದ್ದರು.

ಭಾರತ ಮತ್ತು ಚೀನಾ ನಡುವಿನದ್ದು ದೊಡ್ಡ ಸಂಘರ್ಷ. ಎರಡೂ ದೇಶಗಳೂ ತಲಾ 1.4 ಶತಕೋಟಿ ಜನಸಂಖ್ಯೆ ಹೊಂಧಿವೆ. ಎರಡೂ ದೇಶಗಳ ಸೈನ್ಯವೂ ಬಲಿಷ್ಠವಾಗಿದೆ. ಭಾರತದಂತೆ ಬಹುಶಃ ಚೀನಾಕ್ಕೂ ಖುಷಿ ಇದ್ದಂತಿಲ್ಲ ಎಂದು ಟ್ರಂಪ್ ಹೇಳಿದ್ದರು.

ನಾನು ಮೋದಿ ಜತೆಗೆ ಮಾತನಾಡಿದ್ದೇನೆ; ಚೀನಾ ಜತೆಗಿನ ಗಡಿ ವಿವಾದ ಸಂಘರ್ಷ ವಿಚಾರದಲ್ಲಿ ಅವರು ಒಳ್ಳೆಯ ಮೂಡ್‌ನಲ್ಲಿ ಇದ್ದಂತಿಲ್ಲ, ಮಧ್ಯಸ್ಥಿಕೆಯಿಂದ ಸಹಾಯವಾಗುತ್ತದೆ ಎಂದು ಉಭಯ ದೇಶಗಳು ಅಭಿಪ್ರಾಯಪಟ್ಟರೆ, ಮಧ್ಯಸ್ಥಿಕೆಗೆ ಸಿದ್ಧ ಎಂದಿದ್ದರು.

“ಭಾರತದಲ್ಲಿ ಅವರು ನನ್ನನ್ನು ಇಷ್ಟಪಡುತ್ತಾರೆ. ಈ ದೇಶದಲ್ಲಿ ಮಾಧ್ಯಮಗಳು ನನ್ನನ್ನು ಇಷ್ಟಪಡುವದಕ್ಕಿಂತ ಭಾರತದಲ್ಲಿ ಅವರು ನನ್ನನ್ನು ಇಷ್ಟಪಡುತ್ತಾರೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರಧಾನಿ ಮೋದಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ಒಬ್ಬ ಮಹಾನ್ ಸಂಭಾವಿತ ವ್ಯಕ್ತಿ” ಎಂದು ಹೇಳಿದ್ದರು.

ನಿನ್ನೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಿದ್ದ ಎಂದು ಪ್ರಸ್ತಾಪ ಮಾಡಿದ ನಂತರ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ “ಇದನ್ನು ಶಾಂತಿಯುತವಾಗಿ ಪರಿಹರಿಸಲು ಭಾರತವು ಚೀನಾದೊಂದಿಗೆ ತೊಡಗಿಸಿಕೊಂಡಿದೆ” ಎಂದು ಪ್ರತಿಕ್ರಿಯೆ ನೀಡಿದ್ದರು.

ಭಾರತ ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎನ್ನಲಾಗಿದೆ.


ಓದಿ: ಭಾರತ-ಚೀನಾ ಗಡಿವಿವಾದ ಮಧ್ಯಸ್ಥಿಕೆ ವಹಿಸಲು ಸಿದ್ದ: ಡೊನಾಲ್ಡ್‌ ಟ್ರಂಪ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...