Homeಅಂತರಾಷ್ಟ್ರೀಯಭಾರತ ಚೀನಾ ಗಡಿ ವಿವಾದ: ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿಲ್ಲ - ಭಾರತ ಸ್ಪಷ್ಟನೆ

ಭಾರತ ಚೀನಾ ಗಡಿ ವಿವಾದ: ಟ್ರಂಪ್ ಜೊತೆ ಮೋದಿ ಮಾತುಕತೆ ನಡೆಸಿಲ್ಲ – ಭಾರತ ಸ್ಪಷ್ಟನೆ

ಭಾರತ ಚೀನಾ ಗಡಿ ವಿವಾದದ ಕುರಿತಾಗಿ ನಾನು ಮೋದಿ ಜತೆಗೆ ಮಾತನಾಡಿದ್ದೇನೆ; ಚೀನಾ ಜತೆಗಿನ ಸಂಘರ್ಷ ವಿಚಾರದಲ್ಲಿ ಅವರು ಒಳ್ಳೆಯ ಮೂಡ್‌ನಲ್ಲಿ ಇದ್ದಂತಿಲ್ಲ ಎಂದು ಅವರು ಹೇಳಿದ್ದರು.

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಚೀನಾ ಗಡಿ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ, ಭಾರತ ಸರ್ಕಾರದ ಉನ್ನತ ಮೂಲಗಳು ಇದನ್ನು ನಿರಾಕರಿಸಿದೆ. ಈ ನಡುವೆ ಇಬ್ಬರು ನಾಯಕರು ಯಾವುದೇ ಸಂವಹನ ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ.

“ಪ್ರಧಾನಿ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಟ್ರಂಪ್ ನಡುವೆ ಇತ್ತೀಚಿಗೆ ಯಾವುದೇ ಸಂಪರ್ಕಗಳು ನಡೆದಿಲ್ಲ. 2020 ರ ಏಪ್ರಿಲ್ 4 ರಂದು ಹೈಡ್ರಾಕ್ಸಿಕ್ಲೋರೋಕ್ವಿನ್ ವಿಷಯದ ಬಗ್ಗೆ ನಡುವೆ ನಡೆದ ಸಂಭಾಷಣೆಯೆ ಕೊನೆಯದು” ಎಂದು ಮೂಲಗಳು ತಿಳಿಸಿವೆ

“ವಿದೇಶಾಂಗ ಸಚಿವಾಲಯವು ರಾಜತಾಂತ್ರಿಕ ಕಾರ್ಯವಿಧಾನಗಳ ಮೂಲಕ ನೇರವಾಗಿ ಚೀನಾದೊಂದಿಗೆ ಸಂಪರ್ಕದಲ್ಲಿದೆ” ಎಂದು ಮೂಲಗಳು ಹೇಳಿದೆ.

ಉಭಯ ರಾಷ್ಟ್ರಗಳ ನಡುವೆ ನಡೆಯುತ್ತಿರುವುದು “ದೊಡ್ಡ ಸಂಘರ್ಷ” ಎಂದು ಬಣ್ಣಿಸಿರುವ ಟ್ರಂಪ್ ಭಾರತ ಮತ್ತು ಚೀನಾ ನಡುವೆ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಇಂದು ಸಹ ಪುನರುಚ್ಚರಿಸಿದ್ದರು.

ಭಾರತ ಮತ್ತು ಚೀನಾ ನಡುವಿನದ್ದು ದೊಡ್ಡ ಸಂಘರ್ಷ. ಎರಡೂ ದೇಶಗಳೂ ತಲಾ 1.4 ಶತಕೋಟಿ ಜನಸಂಖ್ಯೆ ಹೊಂಧಿವೆ. ಎರಡೂ ದೇಶಗಳ ಸೈನ್ಯವೂ ಬಲಿಷ್ಠವಾಗಿದೆ. ಭಾರತದಂತೆ ಬಹುಶಃ ಚೀನಾಕ್ಕೂ ಖುಷಿ ಇದ್ದಂತಿಲ್ಲ ಎಂದು ಟ್ರಂಪ್ ಹೇಳಿದ್ದರು.

ನಾನು ಮೋದಿ ಜತೆಗೆ ಮಾತನಾಡಿದ್ದೇನೆ; ಚೀನಾ ಜತೆಗಿನ ಗಡಿ ವಿವಾದ ಸಂಘರ್ಷ ವಿಚಾರದಲ್ಲಿ ಅವರು ಒಳ್ಳೆಯ ಮೂಡ್‌ನಲ್ಲಿ ಇದ್ದಂತಿಲ್ಲ, ಮಧ್ಯಸ್ಥಿಕೆಯಿಂದ ಸಹಾಯವಾಗುತ್ತದೆ ಎಂದು ಉಭಯ ದೇಶಗಳು ಅಭಿಪ್ರಾಯಪಟ್ಟರೆ, ಮಧ್ಯಸ್ಥಿಕೆಗೆ ಸಿದ್ಧ ಎಂದಿದ್ದರು.

“ಭಾರತದಲ್ಲಿ ಅವರು ನನ್ನನ್ನು ಇಷ್ಟಪಡುತ್ತಾರೆ. ಈ ದೇಶದಲ್ಲಿ ಮಾಧ್ಯಮಗಳು ನನ್ನನ್ನು ಇಷ್ಟಪಡುವದಕ್ಕಿಂತ ಭಾರತದಲ್ಲಿ ಅವರು ನನ್ನನ್ನು ಇಷ್ಟಪಡುತ್ತಾರೆ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರಧಾನಿ ಮೋದಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ಒಬ್ಬ ಮಹಾನ್ ಸಂಭಾವಿತ ವ್ಯಕ್ತಿ” ಎಂದು ಹೇಳಿದ್ದರು.

ನಿನ್ನೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಸಿದ್ದ ಎಂದು ಪ್ರಸ್ತಾಪ ಮಾಡಿದ ನಂತರ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ “ಇದನ್ನು ಶಾಂತಿಯುತವಾಗಿ ಪರಿಹರಿಸಲು ಭಾರತವು ಚೀನಾದೊಂದಿಗೆ ತೊಡಗಿಸಿಕೊಂಡಿದೆ” ಎಂದು ಪ್ರತಿಕ್ರಿಯೆ ನೀಡಿದ್ದರು.

ಭಾರತ ಚೀನಾ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೂರ್ವ ಲಡಾಖ್‌ನ ಲೈನ್‌ ಆಫ್‌ ಕಂಟ್ರೋಲ್‌ ಉದ್ದಕ್ಕೂ ಹಲವಾರು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರು ಮುಖಾಮುಖಿಯಾಗಿದ್ದಾರೆ. ಇದು 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನ ನಂತರ ಅತಿದೊಡ್ಡ ಮಿಲಿಟರಿ ಮುಖಾಮುಖಿಯಾಗಿದೆ ಎನ್ನಲಾಗಿದೆ.


ಓದಿ: ಭಾರತ-ಚೀನಾ ಗಡಿವಿವಾದ ಮಧ್ಯಸ್ಥಿಕೆ ವಹಿಸಲು ಸಿದ್ದ: ಡೊನಾಲ್ಡ್‌ ಟ್ರಂಪ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...