Homeಮುಖಪುಟ''ಮೋದಿ ಹಠಾವೋ, ದೇಶ್ ಬಚಾವೋ'' ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

”ಮೋದಿ ಹಠಾವೋ, ದೇಶ್ ಬಚಾವೋ” ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

- Advertisement -
- Advertisement -

“ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯ ಪೋಸ್ಟರ್‌ಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸಲು ಕರೆ ನೀಡುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯಲ್ಲಿ ಕಾಣಿಸಿಕೊಂಡವೆ. ಇದು ಬಿಜೆಪಿ-ಎಎಪಿ ನಡುವಿನ ಪೋಸ್ಟರ್‌ ವಾರ್‌ಗೆ ಸಾಕ್ಷಿಯಾಗಿದೆ.

ದೆಹಲಿ ಪೊಲೀಸರು ಮೋದಿ ವಿರೋಧಿ ಪೋಸ್ಟರ್‌ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ, ”ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯುಳ್ಳ ಸಾವಿರಾರು ಪೋಸ್ಟರ್‌ಗಳನ್ನು ವಶಕ್ಕೆ ಪಡಿಸಿಕೊಂಡರು. ಈ ಪೋಸ್ಟರ್‌ಗಳನ್ನು ಆಪ್ ಕಚೇರಿಗೆ ಸಾಗಿಸಲಾಗುತ್ತಿತ್ತು ಎಂದು ವಾಹನ ಚಾಲಕ ಹೇಳಿದ್ದಾನೆ. ಈ ಘಟನೆಯ ನಂತರ ಪ್ರಿಂಟಿಂಗ್ ಪ್ರೆಸ್‌ನ ಇಬ್ಬರು ಮಾಲೀಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಮತ್ತು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೀಗ ಬಿಜೆಪಿಯು ಎಎಪಿ ವಿರುದ್ಧ ಪೋಸ್ಟರ್ ವಾರ್‌ಗೆ ಮುಂದಾಗಿದ್ದು, ”ಕೇಜ್ರಿವಾಲ್ ಅಪ್ರಾಮಾಣಿಕ, ಭ್ರಷ್ಟ ಸರ್ವಾಧಿಕಾರಿ”, ”ಅರವಿಂದ್ ಕೇಜ್ರಿವಾಲ್ ಅವರನ್ನು ತೆಗೆದುಹಾಕಿ, ದೆಹಲಿಯನ್ನು ಉಳಿಸಿ” ಎಂಬ ಘೋಷಣೆಯನ್ನು ಹೊಂದಿರುವ ಪೋಸ್ಟರ್‌ಗಳನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ತಮ್ಮನ್ನು ಪದಚ್ಯುತಗೊಳಿಸುವಂತೆ ಹೇಳಲಾದ ಪೋಸ್ಟರ್‌ಗಳನ್ನು ನೋಡಿದ್ದೇನೆ ಮತ್ತು ಪ್ರಜಾಪ್ರಭುತ್ವದಲ್ಲಿ ಅಂತಹ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲರಿಗೂ ಹಕ್ಕಿದೆ” ಎಂದು ಹೇಳಿದ್ದಾರೆ.

”ಇಂತಹ ಪೋಸ್ಟರ್‌ಗಳಿಂದ ನನಗೆ ಯಾವುದೇ ತೊಂದರೆ ಇಲ್ಲ. ಆದರೆ ನಿನ್ನೆ ಪ್ರಿಂಟಿಂಗ್ ಪ್ರೆಸ್ ಮಾಲೀಕ ಮತ್ತು ಪೋಸ್ಟರ್ ಅಂಟಿಸುತ್ತಿದ್ದ ಆರು ಬಡವರನ್ನು ಏಕೆ ಬಂಧಿಸಲಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ಪೋಸ್ಟರ್‌ಗಳಿಗೆ ಪ್ರಧಾನಿ ಹೆದರುತ್ತಿದ್ದಾರೆ ಎಂದು ತೋರಿಸುತ್ತದೆ. ನಾಲ್ಕು ಜನ ಬಂದು ಹೀಗೆ ಪೋಸ್ಟರ್ ಅಂಟಿಸಿದರೆ ಏನು ವ್ಯತ್ಯಾಸವಾಗುತ್ತದೆ? ಜನರು ಅಂತಹ ಪೋಸ್ಟರ್‌ಗಳನ್ನು ಅಂಟಿಸುತ್ತಾರಾ? ಅಂತಹ ಶಕ್ತಿಶಾಲಿ ಪ್ರಧಾನಿ ಇದನ್ನು ನಿಭಾಯಿಸುವುದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಕೇಜ್ರಿವಾಲ್ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನದ ನಂತರ ಬಿಜೆಪಿ-ಎಎಪಿ ವಾರ್ ಮತ್ತಷ್ಟು ತೀವ್ರಗೊಂಡಿದೆ. ಅದರ ಭಾಗವಾಗಿ ಎರಡೂ ಪಕ್ಷದವರು ಈಗ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆ.

”ದಾಖಲಾದ 138 ಪ್ರಕರಣಗಳಲ್ಲಿ 36 ಪ್ರಕರಣಗಳು ಪ್ರಧಾನಿ ಮೋದಿ ವಿರೋಧಿ ಪೋಸ್ಟರ್‌ಗಳಿಗಾಗಿ ದಾಖಲಾಗಿವೆ. ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಕೆಲವರನ್ನು ಬಂಧಿಸಲಾಗಿದೆ ಮತ್ತು ಪೋಸ್ಟರ್‌ಗಳು ಪ್ರಿಂಟಿಂಗ್ ಪ್ರೆಸ್‌ನ ಹೆಸರನ್ನು ಕಾನೂನಿನಡಿಯಲ್ಲಿ ಹೊಂದಿರಬೇಕು ಹಾಗಾಗಿ ಪ್ರಿಂಟಿಂಗ್‌ಪ್ರೆಸ್ ಮಾಲೀಕರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರ ಈ ಸಮರ್ಥನೆಯನ್ನು  ಕೇಜ್ರಿವಾಲ್ ಅವರು ತಿರಸ್ಕರಿಸಿದ್ದು, ಪ್ರಧಾನಿ “ಹೆದರಿದ್ದಾರೆ” ಎಂದು ಹೇಳಿದರು.

”ಪೋಸ್ಟರ್‌ಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ಯಾರಾದರೂ ಈ ಪೋಸ್ಟರ್‌ಗಳನ್ನು ನಗರದ ತುಂಬೆಲ್ಲಾ ಅಂಟಿಸಬಹುದು ಎನ್ನುವ ಭಯದಿಂದ ಮೋದಿಜಿ ಈ ಕ್ರಮಕ್ಕೆ ಮುಂದಾಗಿದ್ದಾರಾ? ಇವರು ಹೆದರುವ ಪ್ರಧಾನಿ, ಅಸುರಕ್ಷಿತ ಪ್ರಧಾನಿ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...