Homeಮುಖಪುಟ''ಮೋದಿ ಹಠಾವೋ, ದೇಶ್ ಬಚಾವೋ'' ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

”ಮೋದಿ ಹಠಾವೋ, ದೇಶ್ ಬಚಾವೋ” ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

- Advertisement -
- Advertisement -

“ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯ ಪೋಸ್ಟರ್‌ಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸಲು ಕರೆ ನೀಡುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯಲ್ಲಿ ಕಾಣಿಸಿಕೊಂಡವೆ. ಇದು ಬಿಜೆಪಿ-ಎಎಪಿ ನಡುವಿನ ಪೋಸ್ಟರ್‌ ವಾರ್‌ಗೆ ಸಾಕ್ಷಿಯಾಗಿದೆ.

ದೆಹಲಿ ಪೊಲೀಸರು ಮೋದಿ ವಿರೋಧಿ ಪೋಸ್ಟರ್‌ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ, ”ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯುಳ್ಳ ಸಾವಿರಾರು ಪೋಸ್ಟರ್‌ಗಳನ್ನು ವಶಕ್ಕೆ ಪಡಿಸಿಕೊಂಡರು. ಈ ಪೋಸ್ಟರ್‌ಗಳನ್ನು ಆಪ್ ಕಚೇರಿಗೆ ಸಾಗಿಸಲಾಗುತ್ತಿತ್ತು ಎಂದು ವಾಹನ ಚಾಲಕ ಹೇಳಿದ್ದಾನೆ. ಈ ಘಟನೆಯ ನಂತರ ಪ್ರಿಂಟಿಂಗ್ ಪ್ರೆಸ್‌ನ ಇಬ್ಬರು ಮಾಲೀಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಮತ್ತು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೀಗ ಬಿಜೆಪಿಯು ಎಎಪಿ ವಿರುದ್ಧ ಪೋಸ್ಟರ್ ವಾರ್‌ಗೆ ಮುಂದಾಗಿದ್ದು, ”ಕೇಜ್ರಿವಾಲ್ ಅಪ್ರಾಮಾಣಿಕ, ಭ್ರಷ್ಟ ಸರ್ವಾಧಿಕಾರಿ”, ”ಅರವಿಂದ್ ಕೇಜ್ರಿವಾಲ್ ಅವರನ್ನು ತೆಗೆದುಹಾಕಿ, ದೆಹಲಿಯನ್ನು ಉಳಿಸಿ” ಎಂಬ ಘೋಷಣೆಯನ್ನು ಹೊಂದಿರುವ ಪೋಸ್ಟರ್‌ಗಳನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ತಮ್ಮನ್ನು ಪದಚ್ಯುತಗೊಳಿಸುವಂತೆ ಹೇಳಲಾದ ಪೋಸ್ಟರ್‌ಗಳನ್ನು ನೋಡಿದ್ದೇನೆ ಮತ್ತು ಪ್ರಜಾಪ್ರಭುತ್ವದಲ್ಲಿ ಅಂತಹ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲರಿಗೂ ಹಕ್ಕಿದೆ” ಎಂದು ಹೇಳಿದ್ದಾರೆ.

”ಇಂತಹ ಪೋಸ್ಟರ್‌ಗಳಿಂದ ನನಗೆ ಯಾವುದೇ ತೊಂದರೆ ಇಲ್ಲ. ಆದರೆ ನಿನ್ನೆ ಪ್ರಿಂಟಿಂಗ್ ಪ್ರೆಸ್ ಮಾಲೀಕ ಮತ್ತು ಪೋಸ್ಟರ್ ಅಂಟಿಸುತ್ತಿದ್ದ ಆರು ಬಡವರನ್ನು ಏಕೆ ಬಂಧಿಸಲಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ಪೋಸ್ಟರ್‌ಗಳಿಗೆ ಪ್ರಧಾನಿ ಹೆದರುತ್ತಿದ್ದಾರೆ ಎಂದು ತೋರಿಸುತ್ತದೆ. ನಾಲ್ಕು ಜನ ಬಂದು ಹೀಗೆ ಪೋಸ್ಟರ್ ಅಂಟಿಸಿದರೆ ಏನು ವ್ಯತ್ಯಾಸವಾಗುತ್ತದೆ? ಜನರು ಅಂತಹ ಪೋಸ್ಟರ್‌ಗಳನ್ನು ಅಂಟಿಸುತ್ತಾರಾ? ಅಂತಹ ಶಕ್ತಿಶಾಲಿ ಪ್ರಧಾನಿ ಇದನ್ನು ನಿಭಾಯಿಸುವುದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಕೇಜ್ರಿವಾಲ್ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನದ ನಂತರ ಬಿಜೆಪಿ-ಎಎಪಿ ವಾರ್ ಮತ್ತಷ್ಟು ತೀವ್ರಗೊಂಡಿದೆ. ಅದರ ಭಾಗವಾಗಿ ಎರಡೂ ಪಕ್ಷದವರು ಈಗ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆ.

”ದಾಖಲಾದ 138 ಪ್ರಕರಣಗಳಲ್ಲಿ 36 ಪ್ರಕರಣಗಳು ಪ್ರಧಾನಿ ಮೋದಿ ವಿರೋಧಿ ಪೋಸ್ಟರ್‌ಗಳಿಗಾಗಿ ದಾಖಲಾಗಿವೆ. ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಕೆಲವರನ್ನು ಬಂಧಿಸಲಾಗಿದೆ ಮತ್ತು ಪೋಸ್ಟರ್‌ಗಳು ಪ್ರಿಂಟಿಂಗ್ ಪ್ರೆಸ್‌ನ ಹೆಸರನ್ನು ಕಾನೂನಿನಡಿಯಲ್ಲಿ ಹೊಂದಿರಬೇಕು ಹಾಗಾಗಿ ಪ್ರಿಂಟಿಂಗ್‌ಪ್ರೆಸ್ ಮಾಲೀಕರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರ ಈ ಸಮರ್ಥನೆಯನ್ನು  ಕೇಜ್ರಿವಾಲ್ ಅವರು ತಿರಸ್ಕರಿಸಿದ್ದು, ಪ್ರಧಾನಿ “ಹೆದರಿದ್ದಾರೆ” ಎಂದು ಹೇಳಿದರು.

”ಪೋಸ್ಟರ್‌ಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ಯಾರಾದರೂ ಈ ಪೋಸ್ಟರ್‌ಗಳನ್ನು ನಗರದ ತುಂಬೆಲ್ಲಾ ಅಂಟಿಸಬಹುದು ಎನ್ನುವ ಭಯದಿಂದ ಮೋದಿಜಿ ಈ ಕ್ರಮಕ್ಕೆ ಮುಂದಾಗಿದ್ದಾರಾ? ಇವರು ಹೆದರುವ ಪ್ರಧಾನಿ, ಅಸುರಕ್ಷಿತ ಪ್ರಧಾನಿ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...