Homeಮುಖಪುಟ''ಮೋದಿ ಹಠಾವೋ, ದೇಶ್ ಬಚಾವೋ'' ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

”ಮೋದಿ ಹಠಾವೋ, ದೇಶ್ ಬಚಾವೋ” ಪೋಸ್ಟರ್‌ ಬೆನ್ನಲ್ಲೇ ಬಿಜೆಪಿಯಿಂದ ಕೇಜ್ರಿವಾಲ್‌ಗೆ ಕೌಂಟರ್ ಪೋಸ್ಟರ್

- Advertisement -
- Advertisement -

“ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯ ಪೋಸ್ಟರ್‌ಗಳ ಮೇಲೆ ದೆಹಲಿ ಪೊಲೀಸರು ದಾಳಿ ನಡೆಸಿದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸಲು ಕರೆ ನೀಡುವ ಪೋಸ್ಟರ್‌ಗಳು ಇಂದು ಬೆಳಿಗ್ಗೆ ದೆಹಲಿಯಲ್ಲಿ ಕಾಣಿಸಿಕೊಂಡವೆ. ಇದು ಬಿಜೆಪಿ-ಎಎಪಿ ನಡುವಿನ ಪೋಸ್ಟರ್‌ ವಾರ್‌ಗೆ ಸಾಕ್ಷಿಯಾಗಿದೆ.

ದೆಹಲಿ ಪೊಲೀಸರು ಮೋದಿ ವಿರೋಧಿ ಪೋಸ್ಟರ್‌ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ, ”ಮೋದಿ ಹಠಾವೋ, ದೇಶ್ ಬಚಾವೋ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ)” ಎಂಬ ಘೋಷಣೆಯುಳ್ಳ ಸಾವಿರಾರು ಪೋಸ್ಟರ್‌ಗಳನ್ನು ವಶಕ್ಕೆ ಪಡಿಸಿಕೊಂಡರು. ಈ ಪೋಸ್ಟರ್‌ಗಳನ್ನು ಆಪ್ ಕಚೇರಿಗೆ ಸಾಗಿಸಲಾಗುತ್ತಿತ್ತು ಎಂದು ವಾಹನ ಚಾಲಕ ಹೇಳಿದ್ದಾನೆ. ಈ ಘಟನೆಯ ನಂತರ ಪ್ರಿಂಟಿಂಗ್ ಪ್ರೆಸ್‌ನ ಇಬ್ಬರು ಮಾಲೀಕರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ ಮತ್ತು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೀಗ ಬಿಜೆಪಿಯು ಎಎಪಿ ವಿರುದ್ಧ ಪೋಸ್ಟರ್ ವಾರ್‌ಗೆ ಮುಂದಾಗಿದ್ದು, ”ಕೇಜ್ರಿವಾಲ್ ಅಪ್ರಾಮಾಣಿಕ, ಭ್ರಷ್ಟ ಸರ್ವಾಧಿಕಾರಿ”, ”ಅರವಿಂದ್ ಕೇಜ್ರಿವಾಲ್ ಅವರನ್ನು ತೆಗೆದುಹಾಕಿ, ದೆಹಲಿಯನ್ನು ಉಳಿಸಿ” ಎಂಬ ಘೋಷಣೆಯನ್ನು ಹೊಂದಿರುವ ಪೋಸ್ಟರ್‌ಗಳನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ”ತಮ್ಮನ್ನು ಪದಚ್ಯುತಗೊಳಿಸುವಂತೆ ಹೇಳಲಾದ ಪೋಸ್ಟರ್‌ಗಳನ್ನು ನೋಡಿದ್ದೇನೆ ಮತ್ತು ಪ್ರಜಾಪ್ರಭುತ್ವದಲ್ಲಿ ಅಂತಹ ಪೋಸ್ಟರ್‌ಗಳನ್ನು ಅಂಟಿಸಲು ಎಲ್ಲರಿಗೂ ಹಕ್ಕಿದೆ” ಎಂದು ಹೇಳಿದ್ದಾರೆ.

”ಇಂತಹ ಪೋಸ್ಟರ್‌ಗಳಿಂದ ನನಗೆ ಯಾವುದೇ ತೊಂದರೆ ಇಲ್ಲ. ಆದರೆ ನಿನ್ನೆ ಪ್ರಿಂಟಿಂಗ್ ಪ್ರೆಸ್ ಮಾಲೀಕ ಮತ್ತು ಪೋಸ್ಟರ್ ಅಂಟಿಸುತ್ತಿದ್ದ ಆರು ಬಡವರನ್ನು ಏಕೆ ಬಂಧಿಸಲಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ. ಇಂತಹ ಪೋಸ್ಟರ್‌ಗಳಿಗೆ ಪ್ರಧಾನಿ ಹೆದರುತ್ತಿದ್ದಾರೆ ಎಂದು ತೋರಿಸುತ್ತದೆ. ನಾಲ್ಕು ಜನ ಬಂದು ಹೀಗೆ ಪೋಸ್ಟರ್ ಅಂಟಿಸಿದರೆ ಏನು ವ್ಯತ್ಯಾಸವಾಗುತ್ತದೆ? ಜನರು ಅಂತಹ ಪೋಸ್ಟರ್‌ಗಳನ್ನು ಅಂಟಿಸುತ್ತಾರಾ? ಅಂತಹ ಶಕ್ತಿಶಾಲಿ ಪ್ರಧಾನಿ ಇದನ್ನು ನಿಭಾಯಿಸುವುದು ಚೆನ್ನಾಗಿ ಕಾಣುತ್ತಿಲ್ಲ” ಎಂದು ಕೇಜ್ರಿವಾಲ್ ಪ್ರಧಾನಿ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಟೀಕಿಸುವ ಪೋಸ್ಟರ್ ವಿಚಾರ: ದೆಹಲಿಯಲ್ಲಿ 100 ಎಫ್‌ಐಆರ್‌ ದಾಖಲು, 6 ಜನರ ಬಂಧನ

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನದ ನಂತರ ಬಿಜೆಪಿ-ಎಎಪಿ ವಾರ್ ಮತ್ತಷ್ಟು ತೀವ್ರಗೊಂಡಿದೆ. ಅದರ ಭಾಗವಾಗಿ ಎರಡೂ ಪಕ್ಷದವರು ಈಗ ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದಾರೆ.

”ದಾಖಲಾದ 138 ಪ್ರಕರಣಗಳಲ್ಲಿ 36 ಪ್ರಕರಣಗಳು ಪ್ರಧಾನಿ ಮೋದಿ ವಿರೋಧಿ ಪೋಸ್ಟರ್‌ಗಳಿಗಾಗಿ ದಾಖಲಾಗಿವೆ. ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಕೆಲವರನ್ನು ಬಂಧಿಸಲಾಗಿದೆ ಮತ್ತು ಪೋಸ್ಟರ್‌ಗಳು ಪ್ರಿಂಟಿಂಗ್ ಪ್ರೆಸ್‌ನ ಹೆಸರನ್ನು ಕಾನೂನಿನಡಿಯಲ್ಲಿ ಹೊಂದಿರಬೇಕು ಹಾಗಾಗಿ ಪ್ರಿಂಟಿಂಗ್‌ಪ್ರೆಸ್ ಮಾಲೀಕರನ್ನು ಬಂಧಿಸಲಾಗಿದೆ” ಎಂದು ಪೊಲೀಸರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರ ಈ ಸಮರ್ಥನೆಯನ್ನು  ಕೇಜ್ರಿವಾಲ್ ಅವರು ತಿರಸ್ಕರಿಸಿದ್ದು, ಪ್ರಧಾನಿ “ಹೆದರಿದ್ದಾರೆ” ಎಂದು ಹೇಳಿದರು.

”ಪೋಸ್ಟರ್‌ಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ಯಾರಾದರೂ ಈ ಪೋಸ್ಟರ್‌ಗಳನ್ನು ನಗರದ ತುಂಬೆಲ್ಲಾ ಅಂಟಿಸಬಹುದು ಎನ್ನುವ ಭಯದಿಂದ ಮೋದಿಜಿ ಈ ಕ್ರಮಕ್ಕೆ ಮುಂದಾಗಿದ್ದಾರಾ? ಇವರು ಹೆದರುವ ಪ್ರಧಾನಿ, ಅಸುರಕ್ಷಿತ ಪ್ರಧಾನಿ” ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...