Homeಮುಖಪುಟಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಶುರುವಾಯಿತಾ ವಾಮಪ್ರಸ್ಥಾನ? ಹೇಗೆ ಅನುಮತಿ ನೀಡಿತು ಚುನಾವಣಾ ಆಯೋಗ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದ ಗುಹೆಯೊಳಗೆ ಥೇಟ್ ಸಾಧು ತರಹ ಕುಳಿತು ಧ್ಯಾನ ಮಾಡಿದ್ದಾರೆ. ಎಂದಿನಂತೆ ಫೋಟೊಗ್ರಾಫರ್, ಕ್ಯಾಮೆರಾಮನ್ ಜೊತೆಗಿದ್ದಾರೆ. ಫೋಟೋ, ಕ್ಲಿಪ್ಪಿಂಗ್ಸ್ ಹೊರಬಿದ್ದಿವೆ. ಈ ಕಾಲದಲ್ಲಿ ಭಕ್ತಿ ಇದ್ದವರು ಮನೆಯಲ್ಲೋ ಅಥವಾ ದೇವಸ್ಥಾನದ ಪರಿಧಿಯಲ್ಲೋ ಧ್ಯಾನ ಮಾಡುತ್ತಾರೆ. ಆದರೆ, ಗುಹೆಯೊಳಕ್ಕೆ ಹೊಕ್ಕ ಪ್ರಧಾನಿ ಯಾವ ಮಸೇಜ್ ಕೊಡುತ್ತಿದ್ದಾರೆ? ಅದು ಕೊನೆಯ ಹಂತದ ಚುನಾವಣೆ ಮುಗಿಯುವ ಮೊದಲೆ?

ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮುಂಜಾನೆ ಕೇದಾರನಾಥ ತಲುಪಿರುವ ಅವರು ಅಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಅಲ್ಲಿನ ಪಹಾರಿ ವೇಷಭೂಷಣದಲ್ಲಿ ಮಿಂಚಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಅಲ್ಲಿ ಶಿವನ ಪೂಜೆ ಕೈಗೊಂಡ ಅವರು, ಥೇಟ್ ಸಾಧುಗಳ ತರಹ ಖಾವಿ ಡ್ರೆಸ್ ಧರಿಸಿ ಗುಹೆಯೊಂದನ್ನು ಹೊಕ್ಕು ಆಧ್ಯಾತ್ಮ ಧ್ಯಾನ ಶುರು ಮಾಡಿದ್ದಾರೆ. ನಾಳೆ ಅವರು ಬದರಿನಾಥಕ್ಕೆ ಭೇಟಿ ಕೊಡಲಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದು ಈ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ. ಈ ಹಿಂದೆಯೂ ರುದ್ರಪ್ರಯಾಗದಲ್ಲಿರುವ ಈ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದರು. ಆದರೆ ಈ ರೀತಿ ದೇವಸ್ಥಾನದಲ್ಲಿ ಕುಳಿತು ಫೋಟೊ ತೆಗೆದು ದೇಶಕ್ಕೆಲ್ಲ ಹಂಚುವುದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಬರುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಈಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ಭೇಟಿ ನೀಡಿದ್ದು ಕುತೂಹಲಕರವಾಗಿದೆ. ಹೋಗುವ ಮಾರ್ಗದಲ್ಲಿ ತಾವು ತೆಗೆದ ಬೆಟ್ಟಸಾಲುಗಳ ಫೋಟೊಗಳನ್ನು ಟ್ವೀಟರ್‍ನಲ್ಲಿ ಹಾಕಿ ಕೊಂಡಿದ್ದಾರೆ.

ಅದಿರಲಿ, 59 ಸೀಟುಗಳ ಚುನಾವಣೆ ನಾಳೆ ನಡೆಯಲಿದೆ. ಮತದಾರರನ್ನು ಇಂಪ್ರೆಸ್ ಮಾಡಲು ಈ ಆಟವೇ ಎಂಬ ಸಂಶಯ ಕಾಡುತ್ತಿದೆ. ಒಂದು ವಾರದಿಂದ ವ್ಯಾಪಕ ಟ್ರೋಲ್ ಗೆ ಒಳಗಾಗುತ್ತಿರುವ ಅವರು ಕಾಲೆಳೆಸಿಕೊಳ್ಳಲು ಅವರು ಈಗ ಮತ್ತೆ ಆಹಾರವಾಗಿದ್ದಾರೆ. ನೆಗಿಟಿವ್ ಆರ್ ಪಾಸಿಟಿವ್ ಒಟ್ಟು ಲೈಮ್‍ಲೈಟ್‍ನಲ್ಲಿರಬೇಕು, ಸದಾ ಪ್ರಚಾರದಲ್ಲಿರಬೇಕು ಎಂಬ ಮೋದಿ ಬಯಕೆ ಮಾತ್ರ ಈಡೇರಿದೆ.

ಇದನ್ನು ಓದಿ: ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿಗೆ ವೈರಾಗ್ಯ ಭಾವ ಕಾಡುತ್ತಿದೆಯಾ ಅಥವಾ ಮತದಾರರ ಮೇಲೆ ಪ್ರಭಾವ ಬೀರಲು, ಪ್ರಚಾರ ಅಂತ್ಯದ ನಂತರವೂ ಸುದ್ದಿಯಲ್ಲಿರಲು ಈ ನಾಟಕವೋ ತಿಳಿಯುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....