Homeಮುಖಪುಟಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಶುರುವಾಯಿತಾ ವಾಮಪ್ರಸ್ಥಾನ? ಹೇಗೆ ಅನುಮತಿ ನೀಡಿತು ಚುನಾವಣಾ ಆಯೋಗ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದ ಗುಹೆಯೊಳಗೆ ಥೇಟ್ ಸಾಧು ತರಹ ಕುಳಿತು ಧ್ಯಾನ ಮಾಡಿದ್ದಾರೆ. ಎಂದಿನಂತೆ ಫೋಟೊಗ್ರಾಫರ್, ಕ್ಯಾಮೆರಾಮನ್ ಜೊತೆಗಿದ್ದಾರೆ. ಫೋಟೋ, ಕ್ಲಿಪ್ಪಿಂಗ್ಸ್ ಹೊರಬಿದ್ದಿವೆ. ಈ ಕಾಲದಲ್ಲಿ ಭಕ್ತಿ ಇದ್ದವರು ಮನೆಯಲ್ಲೋ ಅಥವಾ ದೇವಸ್ಥಾನದ ಪರಿಧಿಯಲ್ಲೋ ಧ್ಯಾನ ಮಾಡುತ್ತಾರೆ. ಆದರೆ, ಗುಹೆಯೊಳಕ್ಕೆ ಹೊಕ್ಕ ಪ್ರಧಾನಿ ಯಾವ ಮಸೇಜ್ ಕೊಡುತ್ತಿದ್ದಾರೆ? ಅದು ಕೊನೆಯ ಹಂತದ ಚುನಾವಣೆ ಮುಗಿಯುವ ಮೊದಲೆ?

ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮುಂಜಾನೆ ಕೇದಾರನಾಥ ತಲುಪಿರುವ ಅವರು ಅಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಅಲ್ಲಿನ ಪಹಾರಿ ವೇಷಭೂಷಣದಲ್ಲಿ ಮಿಂಚಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಅಲ್ಲಿ ಶಿವನ ಪೂಜೆ ಕೈಗೊಂಡ ಅವರು, ಥೇಟ್ ಸಾಧುಗಳ ತರಹ ಖಾವಿ ಡ್ರೆಸ್ ಧರಿಸಿ ಗುಹೆಯೊಂದನ್ನು ಹೊಕ್ಕು ಆಧ್ಯಾತ್ಮ ಧ್ಯಾನ ಶುರು ಮಾಡಿದ್ದಾರೆ. ನಾಳೆ ಅವರು ಬದರಿನಾಥಕ್ಕೆ ಭೇಟಿ ಕೊಡಲಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದು ಈ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ. ಈ ಹಿಂದೆಯೂ ರುದ್ರಪ್ರಯಾಗದಲ್ಲಿರುವ ಈ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದರು. ಆದರೆ ಈ ರೀತಿ ದೇವಸ್ಥಾನದಲ್ಲಿ ಕುಳಿತು ಫೋಟೊ ತೆಗೆದು ದೇಶಕ್ಕೆಲ್ಲ ಹಂಚುವುದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಬರುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಈಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ಭೇಟಿ ನೀಡಿದ್ದು ಕುತೂಹಲಕರವಾಗಿದೆ. ಹೋಗುವ ಮಾರ್ಗದಲ್ಲಿ ತಾವು ತೆಗೆದ ಬೆಟ್ಟಸಾಲುಗಳ ಫೋಟೊಗಳನ್ನು ಟ್ವೀಟರ್‍ನಲ್ಲಿ ಹಾಕಿ ಕೊಂಡಿದ್ದಾರೆ.

ಅದಿರಲಿ, 59 ಸೀಟುಗಳ ಚುನಾವಣೆ ನಾಳೆ ನಡೆಯಲಿದೆ. ಮತದಾರರನ್ನು ಇಂಪ್ರೆಸ್ ಮಾಡಲು ಈ ಆಟವೇ ಎಂಬ ಸಂಶಯ ಕಾಡುತ್ತಿದೆ. ಒಂದು ವಾರದಿಂದ ವ್ಯಾಪಕ ಟ್ರೋಲ್ ಗೆ ಒಳಗಾಗುತ್ತಿರುವ ಅವರು ಕಾಲೆಳೆಸಿಕೊಳ್ಳಲು ಅವರು ಈಗ ಮತ್ತೆ ಆಹಾರವಾಗಿದ್ದಾರೆ. ನೆಗಿಟಿವ್ ಆರ್ ಪಾಸಿಟಿವ್ ಒಟ್ಟು ಲೈಮ್‍ಲೈಟ್‍ನಲ್ಲಿರಬೇಕು, ಸದಾ ಪ್ರಚಾರದಲ್ಲಿರಬೇಕು ಎಂಬ ಮೋದಿ ಬಯಕೆ ಮಾತ್ರ ಈಡೇರಿದೆ.

ಇದನ್ನು ಓದಿ: ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿಗೆ ವೈರಾಗ್ಯ ಭಾವ ಕಾಡುತ್ತಿದೆಯಾ ಅಥವಾ ಮತದಾರರ ಮೇಲೆ ಪ್ರಭಾವ ಬೀರಲು, ಪ್ರಚಾರ ಅಂತ್ಯದ ನಂತರವೂ ಸುದ್ದಿಯಲ್ಲಿರಲು ಈ ನಾಟಕವೋ ತಿಳಿಯುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...