Homeಮುಖಪುಟಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಶುರುವಾಯಿತಾ ವಾಮಪ್ರಸ್ಥಾನ? ಹೇಗೆ ಅನುಮತಿ ನೀಡಿತು ಚುನಾವಣಾ ಆಯೋಗ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದ ಗುಹೆಯೊಳಗೆ ಥೇಟ್ ಸಾಧು ತರಹ ಕುಳಿತು ಧ್ಯಾನ ಮಾಡಿದ್ದಾರೆ. ಎಂದಿನಂತೆ ಫೋಟೊಗ್ರಾಫರ್, ಕ್ಯಾಮೆರಾಮನ್ ಜೊತೆಗಿದ್ದಾರೆ. ಫೋಟೋ, ಕ್ಲಿಪ್ಪಿಂಗ್ಸ್ ಹೊರಬಿದ್ದಿವೆ. ಈ ಕಾಲದಲ್ಲಿ ಭಕ್ತಿ ಇದ್ದವರು ಮನೆಯಲ್ಲೋ ಅಥವಾ ದೇವಸ್ಥಾನದ ಪರಿಧಿಯಲ್ಲೋ ಧ್ಯಾನ ಮಾಡುತ್ತಾರೆ. ಆದರೆ, ಗುಹೆಯೊಳಕ್ಕೆ ಹೊಕ್ಕ ಪ್ರಧಾನಿ ಯಾವ ಮಸೇಜ್ ಕೊಡುತ್ತಿದ್ದಾರೆ? ಅದು ಕೊನೆಯ ಹಂತದ ಚುನಾವಣೆ ಮುಗಿಯುವ ಮೊದಲೆ?

ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮುಂಜಾನೆ ಕೇದಾರನಾಥ ತಲುಪಿರುವ ಅವರು ಅಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಅಲ್ಲಿನ ಪಹಾರಿ ವೇಷಭೂಷಣದಲ್ಲಿ ಮಿಂಚಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಅಲ್ಲಿ ಶಿವನ ಪೂಜೆ ಕೈಗೊಂಡ ಅವರು, ಥೇಟ್ ಸಾಧುಗಳ ತರಹ ಖಾವಿ ಡ್ರೆಸ್ ಧರಿಸಿ ಗುಹೆಯೊಂದನ್ನು ಹೊಕ್ಕು ಆಧ್ಯಾತ್ಮ ಧ್ಯಾನ ಶುರು ಮಾಡಿದ್ದಾರೆ. ನಾಳೆ ಅವರು ಬದರಿನಾಥಕ್ಕೆ ಭೇಟಿ ಕೊಡಲಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದು ಈ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ. ಈ ಹಿಂದೆಯೂ ರುದ್ರಪ್ರಯಾಗದಲ್ಲಿರುವ ಈ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದರು. ಆದರೆ ಈ ರೀತಿ ದೇವಸ್ಥಾನದಲ್ಲಿ ಕುಳಿತು ಫೋಟೊ ತೆಗೆದು ದೇಶಕ್ಕೆಲ್ಲ ಹಂಚುವುದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಬರುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಈಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ಭೇಟಿ ನೀಡಿದ್ದು ಕುತೂಹಲಕರವಾಗಿದೆ. ಹೋಗುವ ಮಾರ್ಗದಲ್ಲಿ ತಾವು ತೆಗೆದ ಬೆಟ್ಟಸಾಲುಗಳ ಫೋಟೊಗಳನ್ನು ಟ್ವೀಟರ್‍ನಲ್ಲಿ ಹಾಕಿ ಕೊಂಡಿದ್ದಾರೆ.

ಅದಿರಲಿ, 59 ಸೀಟುಗಳ ಚುನಾವಣೆ ನಾಳೆ ನಡೆಯಲಿದೆ. ಮತದಾರರನ್ನು ಇಂಪ್ರೆಸ್ ಮಾಡಲು ಈ ಆಟವೇ ಎಂಬ ಸಂಶಯ ಕಾಡುತ್ತಿದೆ. ಒಂದು ವಾರದಿಂದ ವ್ಯಾಪಕ ಟ್ರೋಲ್ ಗೆ ಒಳಗಾಗುತ್ತಿರುವ ಅವರು ಕಾಲೆಳೆಸಿಕೊಳ್ಳಲು ಅವರು ಈಗ ಮತ್ತೆ ಆಹಾರವಾಗಿದ್ದಾರೆ. ನೆಗಿಟಿವ್ ಆರ್ ಪಾಸಿಟಿವ್ ಒಟ್ಟು ಲೈಮ್‍ಲೈಟ್‍ನಲ್ಲಿರಬೇಕು, ಸದಾ ಪ್ರಚಾರದಲ್ಲಿರಬೇಕು ಎಂಬ ಮೋದಿ ಬಯಕೆ ಮಾತ್ರ ಈಡೇರಿದೆ.

ಇದನ್ನು ಓದಿ: ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿಗೆ ವೈರಾಗ್ಯ ಭಾವ ಕಾಡುತ್ತಿದೆಯಾ ಅಥವಾ ಮತದಾರರ ಮೇಲೆ ಪ್ರಭಾವ ಬೀರಲು, ಪ್ರಚಾರ ಅಂತ್ಯದ ನಂತರವೂ ಸುದ್ದಿಯಲ್ಲಿರಲು ಈ ನಾಟಕವೋ ತಿಳಿಯುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...