Homeಮುಖಪುಟಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಕೇದಾರನಾಥದಲ್ಲಿ ‘ಸಾಧು’ ಮೋದಿ : ಅಯ್ಯೋ ಶಿವನ ಗುಹೆಯೊಳಗೆ ಧ್ಯಾನ!

ಶುರುವಾಯಿತಾ ವಾಮಪ್ರಸ್ಥಾನ? ಹೇಗೆ ಅನುಮತಿ ನೀಡಿತು ಚುನಾವಣಾ ಆಯೋಗ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದ ಗುಹೆಯೊಳಗೆ ಥೇಟ್ ಸಾಧು ತರಹ ಕುಳಿತು ಧ್ಯಾನ ಮಾಡಿದ್ದಾರೆ. ಎಂದಿನಂತೆ ಫೋಟೊಗ್ರಾಫರ್, ಕ್ಯಾಮೆರಾಮನ್ ಜೊತೆಗಿದ್ದಾರೆ. ಫೋಟೋ, ಕ್ಲಿಪ್ಪಿಂಗ್ಸ್ ಹೊರಬಿದ್ದಿವೆ. ಈ ಕಾಲದಲ್ಲಿ ಭಕ್ತಿ ಇದ್ದವರು ಮನೆಯಲ್ಲೋ ಅಥವಾ ದೇವಸ್ಥಾನದ ಪರಿಧಿಯಲ್ಲೋ ಧ್ಯಾನ ಮಾಡುತ್ತಾರೆ. ಆದರೆ, ಗುಹೆಯೊಳಕ್ಕೆ ಹೊಕ್ಕ ಪ್ರಧಾನಿ ಯಾವ ಮಸೇಜ್ ಕೊಡುತ್ತಿದ್ದಾರೆ? ಅದು ಕೊನೆಯ ಹಂತದ ಚುನಾವಣೆ ಮುಗಿಯುವ ಮೊದಲೆ?

ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಉತ್ತರಾಖಂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಮುಂಜಾನೆ ಕೇದಾರನಾಥ ತಲುಪಿರುವ ಅವರು ಅಲ್ಲಿ ನಡೆಯುತ್ತಿರುವ ಪುನರ್ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಅಲ್ಲಿನ ಪಹಾರಿ ವೇಷಭೂಷಣದಲ್ಲಿ ಮಿಂಚಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಅಲ್ಲಿ ಶಿವನ ಪೂಜೆ ಕೈಗೊಂಡ ಅವರು, ಥೇಟ್ ಸಾಧುಗಳ ತರಹ ಖಾವಿ ಡ್ರೆಸ್ ಧರಿಸಿ ಗುಹೆಯೊಂದನ್ನು ಹೊಕ್ಕು ಆಧ್ಯಾತ್ಮ ಧ್ಯಾನ ಶುರು ಮಾಡಿದ್ದಾರೆ. ನಾಳೆ ಅವರು ಬದರಿನಾಥಕ್ಕೆ ಭೇಟಿ ಕೊಡಲಿದ್ದಾರೆ.

ಚುನಾವಣಾ ಆಯೋಗದಿಂದ ಅನುಮತಿ ಪಡೆದು ಈ ಪ್ರವಾಸವನ್ನು ಅವರು ಕೈಗೊಂಡಿದ್ದಾರೆ. ಈ ಹಿಂದೆಯೂ ರುದ್ರಪ್ರಯಾಗದಲ್ಲಿರುವ ಈ ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದರು. ಆದರೆ ಈ ರೀತಿ ದೇವಸ್ಥಾನದಲ್ಲಿ ಕುಳಿತು ಫೋಟೊ ತೆಗೆದು ದೇಶಕ್ಕೆಲ್ಲ ಹಂಚುವುದು ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಬರುವುದಿಲ್ಲವೇ ಎಂಬ ಪ್ರಶ್ನೆ ಎದ್ದಿದೆ.

ಈಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ಭೇಟಿ ನೀಡಿದ್ದು ಕುತೂಹಲಕರವಾಗಿದೆ. ಹೋಗುವ ಮಾರ್ಗದಲ್ಲಿ ತಾವು ತೆಗೆದ ಬೆಟ್ಟಸಾಲುಗಳ ಫೋಟೊಗಳನ್ನು ಟ್ವೀಟರ್‍ನಲ್ಲಿ ಹಾಕಿ ಕೊಂಡಿದ್ದಾರೆ.

ಅದಿರಲಿ, 59 ಸೀಟುಗಳ ಚುನಾವಣೆ ನಾಳೆ ನಡೆಯಲಿದೆ. ಮತದಾರರನ್ನು ಇಂಪ್ರೆಸ್ ಮಾಡಲು ಈ ಆಟವೇ ಎಂಬ ಸಂಶಯ ಕಾಡುತ್ತಿದೆ. ಒಂದು ವಾರದಿಂದ ವ್ಯಾಪಕ ಟ್ರೋಲ್ ಗೆ ಒಳಗಾಗುತ್ತಿರುವ ಅವರು ಕಾಲೆಳೆಸಿಕೊಳ್ಳಲು ಅವರು ಈಗ ಮತ್ತೆ ಆಹಾರವಾಗಿದ್ದಾರೆ. ನೆಗಿಟಿವ್ ಆರ್ ಪಾಸಿಟಿವ್ ಒಟ್ಟು ಲೈಮ್‍ಲೈಟ್‍ನಲ್ಲಿರಬೇಕು, ಸದಾ ಪ್ರಚಾರದಲ್ಲಿರಬೇಕು ಎಂಬ ಮೋದಿ ಬಯಕೆ ಮಾತ್ರ ಈಡೇರಿದೆ.

ಇದನ್ನು ಓದಿ: ಮೋದಿ ಅಮಿತ್ ಷಾ ಗೆ ಕ್ಲಿನ್ ಚಿಟ್ ಪ್ರಕರಣ: ಚುನಾವಣಾ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ಮೋದಿಗೆ ವೈರಾಗ್ಯ ಭಾವ ಕಾಡುತ್ತಿದೆಯಾ ಅಥವಾ ಮತದಾರರ ಮೇಲೆ ಪ್ರಭಾವ ಬೀರಲು, ಪ್ರಚಾರ ಅಂತ್ಯದ ನಂತರವೂ ಸುದ್ದಿಯಲ್ಲಿರಲು ಈ ನಾಟಕವೋ ತಿಳಿಯುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...