Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...