Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...