Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...