Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...