Homeಮುಖಪುಟ2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಮೊದಲ ಹಂತವನ್ನು ಉದ್ಘಾಟಿಸಿ, ರೈಲಿನಲ್ಲಿ ಪ್ರಯಾಣಿಸಿದರು. ಆದರೆ 2019ರಲ್ಲಿಯೇ ಈ ಯೋಜನೆಯನ್ನು ಉದ್ಘಾಟಿಸಲಾಗಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ವ್ಯಂಗ್ಯವಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನ 2019ರ ಮಾರ್ಚ್‌ನಲ್ಲಿ ಮೋದಿಯವರು ಅಹಮದಾಬಾದ್‌ ಮೆಟ್ರೋ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದರು. ಈಗ ಗುಜರಾತ್‌ ವಿಧಾನಸಭಾ ಚುನಾವಣೆಗೂ ಮುನ್ನ ಮತ್ತೊಮ್ಮೆ ಉದ್ಘಾಟಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಬಂದಾಗ ಮತ್ತೊಮ್ಮೆ ಚಾಲನೆ ನೀಡಲಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ.

ಮೊದಲ ಹಂತದ ಮೆಟ್ರೋ ಯೋಜನೆಯನ್ನು ಎರಡು ಬಾರಿ ಉದ್ಘಾಟನೆ ಮಾಡಿರುವುದು ನಿಜ. ಆದರೆ ಇಲ್ಲೊಂದು ಸಣ್ಣ ವ್ಯತ್ಯಾಸವನ್ನು ಗುರುತಿಸಬಹುದು.

2022, ಸೆಪ್ಟೆಂಬರ್‌ 30ರ ಸುದ್ದಿ

ಮೆಟ್ರೋ ಯೋಜನೆಯ ಪೂರ್ವ-ಪಶ್ಚಿಮ ಕಾರಿಡಾರ್‌ನ ಕಲುಪುರ ನಿಲ್ದಾಣದಲ್ಲಿ ಶುಕ್ರವಾರ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದರು. ಗಾಂಧಿನಗರ ರೈಲು ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರು, ಕಲುಪುರ ನಿಲ್ದಾಣದಲ್ಲಿ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಿದರು.

ನಂತರ ಅಲ್ಲಿಯೇ ರೈಲು ಹತ್ತಿ ತಲ್ತೇಜ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಪ್ರಯಾಣದ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಪಕ್ಷದ ಸಂಸದರಾದ ಸಿ.ಆರ್.ಪಾಟೀಲ್, ಕಿರಿತ್ ಸೋಲಂಕಿ ಜೊತೆಗಿದ್ದರು.

ಈ ಮೂಲಕ 17 ನಿಲ್ದಾಣಗಳ ಥಾಲ್ತೇಜ್ ಮತ್ತು ವಸ್ತ್ರಾಲ್ ನಡುವಿನ ಯೋಜನೆಯ 21-ಕಿಮೀ ಕಾರಿಡಾರ್ ಕಾರ್ಯಾರಂಭ ಮಾಡಿತು. ಈ ಕಾರಿಡಾರ್‌ನಲ್ಲಿ ಸುಮಾರು 6.6 ಕಿಮೀ ಮಾರ್ಗವು ಭೂಮಿಯ ಒಳಗೆ ನಿರ್ಮಾಣವಾಗಿದೆ ಎಂದು ಗುಜರಾತ್ ಮೆಟ್ರೋ ರೈಲು ನಿಗಮ (ಜಿಎಂಆರ್‌ಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ರೈಲು ಟಿಕೆಟ್‌ಗಳ ಬೆಲೆ 5 ರಿಂದ 15 ರೂಪಾಯಿಗಳವರೆಗೆ ಇರುತ್ತದೆ ಎಂದು ಜಿಎಂಆರ್‌ಸಿ ತಿಳಿಸಿದೆ. ಯೋಜನೆಯ ಎರಡನೇ ಹಂತವು ರಾಜ್ಯದ ರಾಜಧಾನಿ ಗಾಂಧಿನಗರ ಹಾಗೂ ಅಹಮದಾಬಾದ್‌ ನಡುವೆ ಸಂಪರ್ಕ ಕಲ್ಪಿಸುತ್ತದೆ. ಇದು ಮೂಲಭೂತವಾಗಿ ಮೊದಲ ಹಂತದ ವಿಸ್ತರಣೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 4, 2019ರಲ್ಲಿ ಉದ್ಘಾಟನೆಯಾಗಿದ್ದೆಷ್ಟು?

ಮಾರ್ಚ್ 4, 2019ರಂದು ಪ್ರಧಾನಿ ನರೇಂದ್ರ ಮೋದಿಯವರು 6.5 ಕಿಮೀಯಷ್ಟು ಮಾರ್ಗವನ್ನು ಮಾತ್ರ ಉದ್ಘಾಟಿಸಿದ್ದರು. ವಸ್ತ್ರಾಲ್‌ನಿಂದ ಅಪೆರೆಲ್ ಪಾರ್ಕ್‌ಗೆ ಸಂಪರ್ಕಿಸುವ ಮಾರ್ಗವನ್ನು ಯೋಜನೆಯ ಮೊದಲ ಹಂತದ ಭಾಗವಾಗಿ ಉದ್ಘಾಟಿಸಿದ್ದರು. ಜೊತೆಗೆ ರೈಲಿನಲ್ಲಿ ಮೋದಿ ಪ್ರಯಾಣಿಸಿದ್ದರು. 2014ರಲ್ಲಿ ಯೋಜನೆಗೆ ಮಂಜೂರಾತಿ ದೊರೆತ್ತಿತ್ತು.

ಅಂದು ವಸ್ತ್ರಲ್ ಗಾಮ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಮೊದಲ ಹಂತದ ಉದ್ಘಾಟನೆಯನ್ನು ಮಾಡಿದ್ದರು. ಫಲಕ ಅನಾವರಣಗೊಳಿಸಿ ಮೆಟ್ರೋ ರೈಲಿಗೆ ಹಸಿರು ಬಾವುಟ ತೋರಿಸಿ ಸ್ವಲ್ಪ ದೂರ ಪ್ರಯಾಣಿಸಿದ್ದರು.

ಇದನ್ನೂ ಓದಿರಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಅಹಮದಾಬಾದ್ ಮೆಟ್ರೋ ಮೊದಲ ಹಂತವು 40 ಕಿಲೋಮೀಟರ್ ಉದ್ದವಿರುತ್ತದೆ. ಅದರಲ್ಲಿ 6.5 ಕಿಮೀ ಭೂಮಿಯೊಳಗೆ ಸಾಗುತ್ತದೆ. ಇದು ಎರಡು ಕಾರಿಡಾರ್‌ಗಳನ್ನು ಹೊಂದಿದೆ (ಒಂದು: ವಸ್ತ್ರಾಲ್‌ನಿಂದ ಥಲ್ತೇಜ್ ಗಾಮ್. ಎರಡು: ಗ್ಯಾಸ್‌ಪುರ್ ಡಿಪೋದಿಂದ ಮೊಟೆರಾ ಕ್ರೀಡಾಂಗಣ).

ಫೆಬ್ರವರಿ 2019ರಲ್ಲಿ ಅಹಮದಾಬಾದ್ ಮೆಟ್ರೋ ರೈಲು ಯೋಜನೆಯ ಹಂತ-2 ಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿತ್ತು. ಎರಡನೇ ಹಂತದ ಯೋಜನೆಯು ಕೇವಲ 28-ಕಿಮೀ ಉದ್ದವಿರುತ್ತದೆ. ಎರಡನೇ ಹಂತವು ಮೊಟೆರಾ ಕ್ರಿಕೆಟ್ ಸ್ಟೇಡಿಯಂನಿಂದ ಗಾಂಧಿನಗರದ ಮಹಾತ್ಮ ಮಂದಿರದವರೆಗೆ ಇರಲಿದೆ.

ಮೋದಿಯವರು 2019ರಲ್ಲಿ 6.6 ಕಿಮೀ ಮಾರ್ಗವನ್ನು ಉದ್ಘಾಟಿಸಿದ್ದರೆ, ಈಗ 21-ಕಿಮೀ ಕಾರಿಡಾರ್‌ಗೆ ಚಾಲನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...