Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...