Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...