Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...