Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...