Homeಮುಖಪುಟ‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

‘ವಿದೇಶದಲ್ಲಿ ನಿಂತು ಭಾರತವನ್ನು ಮೋದಿ ಅವಮಾನಿಸಿದ್ದು’: ಹಳೆಯ ವಿಡಿಯೊಗಳ ಮೂಲಕ ಕಾಂಗ್ರೆಸ್ ತಿರುಗೇಟು

ರಾಹುಲ್ ಗಾಂಧಿಯವರು ವಿದೇಶಕ್ಕೆ ಹೋದಾಗ ಭಾರತವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ

- Advertisement -
- Advertisement -

ವಿದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ರಾಹುಲ್‌ ಗಾಂಧಿಯವರು ಭಾರತವನ್ನು ವಿದೇಶಿ ನೆಲದಲ್ಲಿ ನಿಂತು ಅಗೌರವಿಸಿದ್ದಾರೆ ಎಂದು ಆರೋಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಮೋದಿಯವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ತುಣುಕುಗಳನ್ನು ಕಾಂಗ್ರೆಸ್‌ ಹಂಚಿಕೊಂಡಿದ್ದು, ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರಿನಾಟೆ, “ಪ್ರಧಾನಿ ಮೋದಿ ಅವರು ವಿದೇಶದಲ್ಲಿ ನಿಂತು ಭಾರತವನ್ನು ಅವಮಾನಿಸಿದ ಸಂದರ್ಭಗಳಿವು” ಎಂದು ತಿಳಿಸಿದ್ದಾರೆ.

ಮೋದಿಯವರು ವಿದೇಶಿಯರನ್ನು ಉದ್ದೇಶಿಸಿ ಮಾತನಾಡಿರುವ ಒಂಬತ್ತು ಭಾಷಣಗಳ ತುಣುಕುಗಳನ್ನು ಈ ಸರಣಿ ಟ್ವೀಟ್ ಒಳಗೊಂಡಿದೆ. ಮೋದಿ ಅಧಿಕಾರಕ್ಕೆ ಬಂದ ನಂತರದ ಮೊದಲ ಕೆಲವು ವರ್ಷಗಳಲ್ಲಿ ಮಾಡಿದ ಹೆಚ್ಚಿನ ಭಾಷಣಗಳಲ್ಲಿ ಮನಮೋಹನ್ ಸಿಂಗ್ ಸರ್ಕಾರವನ್ನು ಉಲ್ಲೇಖಿಸುತ್ತಾ ಟೀಕೆಗಳನ್ನು ಮಾಡಿದ್ದರು.

ಚೀನಾ

2015ರಲ್ಲಿ ಮೋದಿ ಅವರು ಚೀನಾದ ಶಾಂಘೈನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ್ದರು. “ವಿದೇಶದಲ್ಲಿರುವ ಭಾರತೀಯರಿಗೆ ನಾನು ಭಾರತಕ್ಕೆ ಸೇರಿದವರು ಎಂಬ ಹೆಮ್ಮೆಯ ಭಾವನೆಯನ್ನು ನೀಡಿದ್ದೇನೆ” ಎಂದು ಹೇಳಿಕೆ ನೀಡಿದ್ದರು.

‘ದಿ ಹಿಂದೂ’ ಪತ್ರಿಕೆಯ ರಾಜತಾಂತ್ರಿಕ ಸಂಪಾದಕಿ ಸುಹಾಸಿನಿ ಹೈದರ್ ಟ್ವೀಟ್ ಮಾಡಿದ್ದು ಮೋದಿ ಹೇಳಿರುವ ಮಾತನ್ನು ಉಲ್ಲೇಖಿಸಿದ್ದಾರೆ. “ಒಂದು ವರ್ಷದ ಹಿಂದೆ ವಿದೇಶದಲ್ಲಿರುವ ಭಾರತೀಯರು ನಮ್ಮ ಗೆಲುವನ್ನು ಸಂಭ್ರಮಿಸಿದರು, ಹಾಡಿದರು, ಕೆಟ್ಟ ದಿನಗಳು ಹೋದವು. ಮೊದಲು ನಾಚಿಕೆಪಡುತ್ತಿದ್ದ ನೀವು ಇಂದು ಭಾರತದ ಬಗ್ಗೆ ಹೆಮ್ಮೆ ಪಡುತ್ತೀರಿ” ಎಂದಿದ್ದರು ಮೋದಿ. ಈ ಬಗ್ಗೆ ‘ದಿ ಹಿಂದೂ’ ಪತ್ರಿಕೆಯೂ ವರದಿ ಮಾಡಿತ್ತು. (ವರದಿ ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ)

ಈ ಮಾತಿಗೆ ಅನೇಕರು ವಿರೋಧ ವ್ಯಕ್ತಪಡಿಸಿರುವುದನ್ನು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿತ್ತು.

ದಕ್ಷಿಣ ಕೊರಿಯಾ

ದಕ್ಷಿಣ ಕೊರಿಯಾದಲ್ಲಿ ಮೇ 18, 2015ರಂದು ಸಿಯೋಲ್‌ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಿದ್ದರು. “ನಾವಿಂದು ಭಾರತದಲ್ಲಿ ಜೀವಿತಾವಧಿ ಶಿಕ್ಷೆಗೆ ಒಳಗಾಗಲು ನಾವು ಈ ಹಿಂದೆ ಏನು ಮಾಡಿದ್ದೆವು ಎಂದು ಆಶ್ಚರ್ಯಪಡುತ್ತಾ ಭಾರತೀಯರು ಹೇಳುವ ಕಾಲವಿತ್ತು. ಇದು ದೇಶವೇ? ಇದು ಸರ್ಕಾರವೇ? ಇವರು ಜನರೇ? ಹೋಗಲಿ ಬಿಡಿ” ಎಂದಿದ್ದರು ಮೋದಿ.

ಮೋದಿಯವರ ಹೆಸರಿನಲ್ಲಿರುವ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾದ ವಿಡಿಯೋದಲ್ಲಿಯೂ ಭಾಷಣ ಲಭ್ಯವಿದೆ.

ಮುಂದುವರಿದು ಮೋದಿ, “ಜನರು (ಹೊರಗೆ) ಹೊರಡುತ್ತಾರೆ. ‘ಸಹೋದರ ನೀವು ಇಲ್ಲಿ ವ್ಯಾಪಾರ ಮಾಡಬಾರದು, ಇಲ್ಲಿ ಬದುಕಬಾರದು’ ಎಂದು ಜನರಿಗೆ ಹೇಳುವುದನ್ನು ನಾವು ನೋಡುತ್ತೇವೆ. ಹೆಚ್ಚಿನ ಜನರು ಈಗಾಗಲೇ ದೇಶದ ಹೊರಗೆ ಕಾಲಿಟ್ಟಿದ್ದಾರೆ. ನಾನು ಕಾರಣಗಳಿಗೆ ಹೋಗಲು ಬಯಸುವುದಿಲ್ಲ. ಇದರ ರಾಜಕೀಯದ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಆದರೆ ಇದು ನೆಲದ ಸತ್ಯ. ಜನರು ನಿರಾಶೆಗೊಂಡರು, ಕೋಪಗೊಂಡರು. ನಾನು ಇಂದು ನಂಬಿಕೆಯಿಂದ ಹೇಳಬಲ್ಲೆ: ವಿವಿಧ ಕ್ಷೇತ್ರಗಳಲ್ಲಿನ ಸಾಧಕರು (ಪ್ರಸಿದ್ಧ ವಿಜ್ಞಾನಿಗಳು ಮತ್ತು ಮುಂತಾದವರು) ವಿದೇಶದಲ್ಲಿ ಇರುವುದಕ್ಕಿಂತ, ಕಡಿಮೆ ಹಣವನ್ನು ಪಡೆಯಲಿದ್ದರೂ ಸಹ ಭಾರತಕ್ಕೆ ಮರಳಲು ಉತ್ಸುಕರಾಗಿದ್ದಾರೆ” ಎಂದು ತಿಳಿಸಿದ್ದರು.

“ಈಗ ಮನಸ್ಥಿತಿ ಬದಲಾಗಿದೆ” ಎಂದು ಪ್ರಧಾನಿ ಬಣ್ಣಿಸಿದ್ದರು. “ಸರ್ಕಾರವೆಂದರೆ ದೇಶವಲ್ಲ, ಇದು 125 ಕೋಟಿ ಜನರ ಉತ್ಸಾಹ” ಎಂದು ತಾತ್ವಿಕವಾಗಿ ಮಾತನಾಡಿದ್ದರು.

ಜರ್ಮನಿ

ಯುರೋಪ್ ಪ್ರವಾಸದ ಭಾಗವಾಗಿ ಜರ್ಮನಿಯ ಬರ್ಲಿನ್‌ನಲ್ಲಿ ಮೋದಿಯವರು ಮಾತನಾಡಿ ಕಾಂಗ್ರೆಸ್‌ನ ವಿರುದ್ಧ ವಾಗ್ದಾಳಿ ನಡೆಸಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. “ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಾರತೀಯರು 1 ರೂಪಾಯಿಯಲ್ಲಿ ಕೇವಲ 15 ಪೈಸೆಗಳನ್ನು ಪಡೆಯುತ್ತಿದ್ದರು” ಎಂದು ಮೋದಿ ಟೀಕಿಸಿದ್ದರು.

“ವೋ ಕೌನ್ಸಾ ಪಂಜಾ ಥಾ ಜೋ 85 ಪೈಸೆ ಘಿಸ್ ಲೇತಾ ಥಾ?” (85 ಪೈಸೆಗಳನ್ನು ಯಾವ ಕೈಗಳು ತೆಗೆದುಕೊಂಡು ಹೋಗುತ್ತಿದ್ದವು?” ಎಂದು ಪ್ರಶ್ನಿಸಿದ್ದರು.

(ಕಾಂಗ್ರೆಸ್ ಪಕ್ಷದ ಚಿಹ್ನೆ ‘ಹಸ್ತ’ದ ಗುರುತು.)

ಆಸ್ಟ್ರೇಲಿಯಾ

2014ರಲ್ಲಿ ತಮ್ಮ ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ಮೋದಿಯವರು ಸಿಡ್ನಿಯ ಒಲಿಂಪಿಕ್ ಪಾರ್ಕ್‌ನಲ್ಲಿರುವ ಆಲ್‌ಫೋನ್ಸ್ ಅರೆನಾದಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ್ದರು. ಸುಮಾರು ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದು ಇದೇ ಮೊದಲಾಗಿತ್ತು.

ಮೋದಿ ತಮ್ಮ ಭಾಷಣದಲ್ಲಿ, “ಹಿಂದಿನ ಸರ್ಕಾರವು, ‘ನಾವು ಈ ಕಾನೂನು ಮಾಡಿದೆವು, ಆ ಕಾನೂನು ಮಾಡಿದೆವು’ ಎಂದು ಹೇಳುತ್ತಿತ್ತು. ಆದರೆ ನನ್ನ ವಾಹನ ಬೇರೆ ದಾರಿಯಲ್ಲಿ ಹೋಗುತ್ತದೆ. ಕಾನೂನುಗಳನ್ನು ರಚಿಸುವಲ್ಲಿ ಅವರು ಸಂತೋಷವನ್ನು ಕಂಡುಕೊಳ್ಳುತ್ತಾರೆ. ಅವುಗಳನ್ನು ಕೊನೆಗೊಳಿಸುವುದರಲ್ಲಿ ನಾನು ಸಂತೋಷವನ್ನು ಕಂಡುಕೊಳ್ಳುತ್ತೇನೆ” ಎಂದು ತಿಳಿಸಿದ್ದರು.

(ಪೂರ್ಣ ಭಾಷಣವನ್ನು ಇಲ್ಲಿ ಕಾಣಬಹುದು.)

ಅಮೆರಿಕ

2014ರ ಸೆಪ್ಟಂಬರ್‌ನಲ್ಲಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮಾತನಾಡಿದ ಮೋದಿ ಅವರು, ಆಸ್ಟ್ರೆಲಿಯಾದಲ್ಲಿ ಮಾತನಾಡಿದ್ದನ್ನೇ ಪುನರುಚ್ಚರಿಸಿದ್ದರು.

ಅವರು ಹಿಂದಿಯಲ್ಲಿ ಮಾಡಿದ ಭಾಷಣದ ಭಾಷಾಂತರವನ್ನು ಇಂಗ್ಲಿಷ್‌ನಲ್ಲಿ ‘ಪ್ರೆಸ್ ಬ್ಯುರೊ ಆಫ್‌ ಇಂಡಿಯಾ’ ಒದಗಿಸಿತ್ತು. (ಅದನ್ನು ‘ಇಲ್ಲಿ’ ನೋಡಬಹುದು.)

“ಅವರು ಆ, ಈ ಕಾನೂನು ಮಾಡಿದ್ದರ ಬಗ್ಗೆ ಹೆಮ್ಮೆಪಡುತ್ತಾರೆ. ಇಡೀ ಚುನಾವಣಾ ಪ್ರಚಾರದಲ್ಲಿ ನೀವು ಇದನ್ನು ಕೇಳಿರಬೇಕು. ನಾನು ವಿಭಿನ್ನವಾಗಿ ಕೆಲಸ ಮಾಡುತ್ತೇನೆ. ಅನಗತ್ಯ ಕಾನೂನುಗಳನ್ನು ತೆಗೆದುಹಾಕಲು ನಾನು ಕೆಲಸ ಮಾಡುತ್ತಿದ್ದೇನೆ. ಇಂತಹ ಹಳತಾದ ಕಾನೂನು, ಅನಗತ್ಯ ಕಾನೂನುಗಳ ಜಾಲದಲ್ಲಿ ಒಬ್ಬ ಸಾಮಾನ್ಯ ಮನುಷ್ಯನು ಪ್ರವೇಶಿಸಲು ಧೈರ್ಯ ಮಾಡಿದರೆ, ಅವನು ತನ್ನ ದಾರಿಯನ್ನು ಕಂಡುಕೊಳ್ಳುವುದಿಲ್ಲ. ನಾನು ವಿಶೇಷವಾಗಿ ತಜ್ಞರ ತಂಡವನ್ನು ರಚಿಸಿದ್ದೇನೆ. ಪ್ರತಿದಿನ ಒಂದಾದರೂ ಕಾನೂನನ್ನು ತೊಡೆದುಹಾಕಲು ಸಾಧ್ಯವಾದರೆ ನಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ನಾನು ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದರು ಪ್ರಧಾನಿ.

ಕೆನಡಾ

ಯೂಟ್ಯೂಬ್‌ನಲ್ಲಿನ ಅಧಿಕೃತ ‘ಪಿಎಂಒ ಇಂಡಿಯಾ’ ಖಾತೆಗೆ 2015ರಲ್ಲಿ ಅಪ್‌ಲೋಡ್ ಮಾಡಿದ ಭಾಷಣವು ಕೆನಡಾದ ಟೊರೊಂಟೊದಲ್ಲಿ ದೊಡ್ಡ ಜನಸಮೂಹವನ್ನುದ್ದೇಶಿಸಿ ಮೋದಿಯವರು ಮಾತನಾಡಿದ್ದಕ್ಕೆ ಸಂಬಂಧಿಸಿದೆ. “ಅಪದ್ರವ ಸೃಷ್ಟಿಸಿದವರು ತೊರೆದಿದ್ದಾರೆ, ಆದರೆ ನಾನು ಅದನ್ನು ಸ್ವಚ್ಛಗೊಳಿಸುತ್ತೇನೆ” ಎನ್ನುತ್ತಾರೆ ಮೋದಿ.

(ಪ್ರೇಕ್ಷಕರ ಚಪ್ಪಾಳೆ ಕೇಳಿಬರುತ್ತದೆ.)

ಯುಕೆ

2018ರಲ್ಲಿ ಲಂಡನ್‌ನಲ್ಲಿ ಮೋದಿಯವರು ಮಾತನಾಡಿರುವ ವಿಡಿಯೊ ಕ್ಲಿಪ್ ಕೂಡ ಸುಪ್ರಿಯಾ ಹಂಚಿಕೊಂಡಿದ್ದಾರೆ. ಈ ಭಾಷಣದ ಬಗ್ಗೆ ‘ದಿ ವೈರ್’ ಕೂಡ ವರದಿ ಮಾಡಿದೆ. ಮೋದಿಯವರು ಲಂಡನ್‌ನಲ್ಲಿ ಮಾಡಿದ ಭಾಷಣಕ್ಕೆ ಭಾರತೀಯ ವೈದ್ಯರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ‘ದಿ ವೈರ್‌’ ವರದಿಯಲ್ಲಿ ಕಾಣಬಹುದು.

ಸಾಮಾಜಿಕ ಮಾಧ್ಯಮಗಳಲ್ಲಿ ಮೋದಿಯವರ ಭಾಷಣ ವ್ಯಾಪಕವಾಗಿ ವೈರಲ್ ಆಗಿತ್ತು. “ಔಷಧೀಯ ಕಂಪನಿಗಳ ಪ್ರಾಯೋಜಿತ ಸಮ್ಮೇಳನಗಳಲ್ಲಿ ಪಾಲ್ಗೊಳ್ಳಲು ವೈದ್ಯರು ವಿದೇಶಿ ಪ್ರವಾಸ ಮಾಡುತ್ತಾರೆ” ಎಂಬುದಾಗಿ ಮೋದಿ ಹೇಳಿಕೆ ನೀಡಿದ್ದರು. “ವೈದ್ಯರ ಸಮ್ಮೇಳನಗಳನ್ನು ಕೆಲವೊಮ್ಮೆ ಸಿಂಗಾಪುರದಲ್ಲಿ, ಕೆಲವೊಮ್ಮೆ ದುಬೈನಲ್ಲಿ ನಡೆಸಲಾಗುತ್ತದೆ ಎಂದು ನಿಮಗೆ ತಿಳಿದಿರಬಹುದು. ಅಲ್ಲಿ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಅವರು ಅಲ್ಲಿಗೆ ಹೋಗುವುದಿಲ್ಲ; ಔಷಧ ಕಂಪನಿಗಳಿಗೆ ಬೇಕಾಗಿರುವುದರಿಂದ ಅವರು ಹೋಗುತ್ತಾರೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದರು.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...