Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....