Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...