Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...