Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...