Homeಮುಖಪುಟನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ

- Advertisement -
- Advertisement -

ಈ ವಿಡಿಯೋ ನೋಡಿ….
ಸಂದರ್ಶಕರಲ್ಲೊಬ್ಬರು ಕೇಳಿದ ಪ್ರಶ್ನೆ ಮೋದಿ ರೆಫರ್ ಮಾಡುತ್ತಿದ್ದ ಫೋಲ್ಡರಿನ ಒಂದು ಕಾಗದದ ಮೇಲ್ಭಾಗದಲ್ಲಿ ಯಥಾವತ್ತಾಗಿ ಪ್ರಿಂಟಾಗಿತ್ತು! ಅಂದರೆ, ಸಂದರ್ಶನಕ್ಕೂ ಮೊದಲೇ ಪ್ರಶ್ನೆಗಳು ಮೋದಿ ಬಳಿ ಇರುತ್ತವೆ. ಅದಕ್ಕೆ ಅವರು ಉತ್ತರ ರೆಡಿ ಮಾಡಿಕೊಂಡು ಬಂದಿರುತ್ತಾರೆ… ಒಂಥರಾ ಪರೀಕ್ಷೆಗೂ ಮೊದಲೇ ಕ್ವೆಶನ್ ಪೇಪರ್ ಲೀಕ್! ಅದೂ ಟಫ್ ಕ್ವೆಶನ್ ಇರುವಂತಿಲ್ಲ…. ಥೂ ಅಸಹ್ಯ…

ಫ್ಯಾಕ್ಟ್ ಚೆಕಿಂಗ್ ಸಂಸ್ಥೆ ಅಲ್ಟ್‍ನ್ಯೂಸ್‍ನ ಸಂಸ್ಥಾಪಕ ಪ್ರತೀಕ್ ಸಿನ್ಹಾರವರು, ನ್ಯೂ ನೇಷನ್ ಚಾನೆಲ್ ಮೋದಿಯೊಂದಿಗೆ ನಡೆಸಿದ ಸಂದರ್ಶನದ ವಿಡಿಯೋವನ್ನು ಸ್ಲೋ ಡೌನ್ ಮಾಡಿ, ಈ ವಿವರಗಳನ್ನು ತೆರೆದು ಇಟ್ಟಿದ್ದಾರೆ…
ಮೊದಲಿಗೆ , ಪ್ರತೀಕ್ ಸಿನ್ಹಾ ಈ ಕುರಿತಂತೆ ಮಾಡಿರುವ ಈ ಟ್ವೀಟ್‍ಗಳನ್ನು ಓದಿ:

ಪ್ರತೀಕ್ ಟ್ವೀಟ್: ‘ನಿರೂಪಕ (ಸಂದರ್ಶಕ) ದೀಪಕ್ ಚೌರಾಸಿಯಾ ಕೇಳುವ ಒಂದು ಪ್ರಶ್ನೆಯು, ಮೋದಿ ಉತ್ತರಿಸಲು ರೆಫರ್ ಮಾಡುತ್ತಿದ್ದ ಕಾಗದದ ಮೇಲ್ಭಾಗದಲ್ಲಿ ಅಕ್ಷರಶ: ಯಥಾವತ್ತಾಗಿ ಮುದ್ರಣವಾಗಿದೆ….’

ಪ್ರತೀಕ್ ಟ್ವೀಟ್2: ಇಲ್ಲಿರುವ ಸಂದರ್ಶನದ ವಿಡಿಯೊ ( ಸ್ಲೋ ಡೌನ್ ಮಾಡಿದ್ದೇವೆ) ನೋಡಿ… ಮೋದಿ ಉತ್ತರಿಸುವ ಮೊದಲು ತಮ್ಮಲ್ಲಿರುವ ಫೈಲ್‍ನಲ್ಲಿನ ಕಾಗದವೊಂದನ್ನು ನೋಡುತ್ತಿರುವ ದೃಶ್ಯ…

ಈಗ ವಿಷಯಕ್ಕೆ ಬರೋಣ. ಪತ್ರಿಕಾಗೋಷ್ಠಿಯನ್ನೇ ನಡೆಸದ ಪ್ರಧಾನಿ ಎಂಬ ಕುಖ್ಯಾತಿಯ ಪ್ರಧಾನಿ ನರೇಂದ್ರ ಮೋದಿ, ಈ ಚುನಾವಣಾ ಸುಗ್ಗಿಯಲ್ಲಿ ಹಲವು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ಸಂದರ್ಶನ ಕೊಡುತ್ತಲೇ ಇದ್ದಾರೆ. ಈ ಸಂದರ್ಶನಗಳ ಬಗ್ಗೆ ಇರುವ ಒಂದು ಸಾಮಾನ್ಯ ವಿಮರ್ಶೆ ಎಂದರೆ, ಸಂದರ್ಶಕರು ಯಾವುದೇ ‘ಟಫ್’ ಪ್ರಶ್ನೆ ಕೇಳುತ್ತಿಲ್ಲ ಎಂಬುದು…

ಈಗ ಇಲ್ಲಿ ತೋರಿಸುತ್ತಿರುವ ಒಂದು ವಿಡಿಯೋ ಕ್ಲಿಪ್ ಪ್ರಕಾರ, ನ್ಯೂಸ್ ನೇಷನ್ ಟಿವಿಗೆ ಕೊಟ್ಟ ಸಂದರ್ಶನದಲ್ಲಿ, ಇಲ್ಲಿ ಉಲ್ಲೇಖಿಸಿದ ನಿರ್ದಿಷ್ಟ ಪ್ರಶ್ನೆಯನ್ನು ಮೋದಿಗೆ ಸಂದರ್ಶನಕ್ಕೂ ಮೊದಲೇ ಕೊಡಲಾಗಿತ್ತು! ಅಲ್ಟ್‍ನ್ಯೂಸ್‍ನ ಪ್ರತೀಕ್ ಸಿನ್ಹಾ ಈ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೋದಿಗೆ ಮೊದಲೇ ಪ್ರಶ್ನೆಗಳನ್ನು ಕಳಿಸಿ ಕೊಟ್ಟು ಸಂದರ್ಶನ ಮಾಡಲಾಗುತ್ತಿದೆ ಎಂಬುದರ ಎಳೆಯನ್ನು ನಮ್ಮ ಮುಂದೆ ಇಟ್ಟಿದ್ದಾರೆ.

ಸಂದರ್ಶನದಲ್ಲಿ ನಿರೂಪಕ ದೀಪಕ್ ಚೌರಾಸಿಯಾ, ‘ಇತ್ತೀಚಿನ ವರ್ಷಗಳಲ್ಲಿ ತಾವು ಯಾವುದಾದರೂ ಕವನ ಬರೆದಿದ್ದೀರಾ?’ ಎಂದು ಮೋದಿಗೆ ಪ್ರಶ್ನಿಸುತ್ತಾರೆ. ಮೋದಿ ತಮ್ಮ ಫೈಲ್‍ನಲ್ಲಿ ‘ತಮ್ಮ’ ಕವನದ ಪೇಜ್ ತೆಗೆದಾಗ, ಅದರ ಮೇಲ್ಭಾಗದಲ್ಲಿ ಚೌರಾಸಿಯಾ ಪ್ರಶ್ನೆ ಯಥಾವತ್ ಮುದ್ರಣವಾಗಿದ್ದನ್ನು ಈ ವಿಡಿಯೋ ತುಣುಕು ತೋರಿಸುತ್ತದೆ…

ನಿರೂಪಕ ಇತ್ತೀಚೆಗೆ ಬರೆದ ಒಂದು ಕವಿತೆಯನ್ನು ವಾಚಿಸಿ ಎಂದಾಗ, ಮೋದಿ ತಮ್ಮ ಫೈಲ್ ಪಡೆದು ಕವಿತೆ (ಮುದ್ರಿತ) ಇರುವ ಪೇಜ್ ತೆಗೆಯುತ್ತಾರೆ… ಇಲ್ಲೇ ಇರುವುದು ರಹಸ್ಯ! ಆಪೇಜ್‍ನ ಮೇಲ್ಭಾಗದಲ್ಲಿ ನಿರೂಪಕ ಕೇಳಿದ ಪ್ರಶ್ನೆ ಡಿಟ್ಟೋ ಪ್ರಿಂಟ್ ಆಗಿದೆ!
ಈ ಸಂದರ್ಶನ ಈಗಾಗಲೇ ಸಾಕಷ್ಟು ತಮಾಷೆಗೆ ಒಳಗಾಗಿದೆ. ಬಾಲಾಕೋಟ್ ದಾಳಿಯ ದಿನದಂದು, ‘ಮೋಡಗಳಿರುವುದರಿಂದ ಪಾಕಿಸ್ತಾನದ ರೆಡಾರ್‍ಗಳಿಗೆ ನಮ್ಮ ವಿಮಾನಗಳನ್ನು ಗುರುತಿಸಲಾಗದು, ಇದೇ ಸುಸಂದರ್ಭ…ಬೇಗನೇ ದಾಳಿ ಆರಂಭಿಸಿ’ ಎಂದು ಸೇನೆಯ ಉನ್ನತ ಅಧಿಕಾರಿಗಳಿಗೆ ತಾನು ಹೇಳಿದ್ದೆ, ಅದರಿಂದ ಕಾರ್ಯಾಚರಣೆ ಶುರುವಾಗಿತು ಎಂದು ಮೋದಿ ಹೇಳಿದ್ದನ್ನು ಜಗತ್ತೇ ಜೋಕ್ ತರಹ ನೋಡುತ್ತಿದೆ.

ಡಿಜಿಟಲ್ ಕ್ಯಾಮೆರಾ, ಇಮೇಲ್ ಮತ್ತು ಪರ್ಸ್‍ಲೆಸ್ ಮೋದಿ

ಅದೇ ಸಂದರ್ಶನದಲ್ಲೇ ಮೋದಿಯವರು 1987-89 ರಲ್ಲೇ ಡಿಜಿಟಲ್ ಕ್ಯಾಮೆರದಲ್ಲಿ ಫೋಟೊ ತೆಗೆದು ದೆಹಲಿಗೆ ಮೇಲ್ ಮಾಡಿದ್ದೆ ಎಂದು ಬೂಸಿ ಬಿಟ್ಟಿದ್ದಾರೆ. ಆಗ ಡಿಜಿಟಲ್ ಕ್ಯಾಮೆರಾವಾಗಲಿ, ಇಮೇಲ್ ಆಗಲಿ ಇರಲಿಲ್ಲ, ಮೋದಿ ಇನ್ನೊಂದು ಸುಳ್ಳು ಹೇಳಿದ್ದಾರೆ ಎಂದು ಸಾಮಾಜಿಕ ಜಾಲಾತಾಣದಲ್ಲಿ ವ್ಯಾಪಕ ಟ್ರೋಲ್ ಗೆ ಒಳಗಾಗಿದೆ.

1997-98 ಎನ್ನುವ ಬದಲು ಮೋದೀಜಿ 1987-88 ಎಂದು ಬಾಯ್ತಪ್ಪಿ ಹೇಳಿದ್ದಾರೇನೋ ಎಂದು ಅವರ ಭಕ್ತರು ಈಗ ಸಬೂಬು ಕೊಡ್ತಾ ಇದ್ದಾರೆ. ಅಲ್ರಿ, ರೆಡಿಮೇಡ್ ಪ್ರಶ್ನೆ, ರೆಡಿಮೇಡ್ ಉತ್ತರದಲ್ಲೂ ಈ ರೀತಿ ಬಾಯ್ತಪ್ಪಿ ಹೇಳ್ತಾರಾ? ಇದು ಇನ್ನಷ್ಟು ಮೂರ್ಖತನದ ಸ್ಯಾಂಪಲ್ಲು, ಅದಕ್ಕಿಂತ ಹೆಚ್ಚಾಗಿ ಸುಳ್ಳನ ಎಡವಟ್ಟು!

ಆಯ್ತು ಅದು ಸರಿ ಎಂದಿಟ್ಟುಕಳ್ಳೋಣ….ಅದೇ ಸಂದರ್ಶನದಲ್ಲಿ ಆ ಸಂದರ್ಭದಲ್ಲಿ ತಮಗೆ ಒಂದು ಪರ್ಸ್ ಖರೀದಿಸುವಷ್ಟೂ ಕಾಸು ಇರಲಿಲ್ಲ ಎಂದಿದ್ದಾರೆ. ಆದರೆ 1995ರ ಸುಮಾರಿಗೆ ಒಂದು ಡಿಜಿಟಲ್ ಕ್ಯಾಮೆರಾದ ದರ 5 ಸಾವಿರ ರೂ.ಗಿಂತ ಹೆಚ್ಚಿತ್ತು. 1995ರಲ್ಲಿ ವಿಎಸ್‍ಎನ್‍ಎಲ್‍ನಿಂದ ಒಂದು ಶೆಲ್ ಇಮೇಲ್ ಅಕೌಂಟ್ ಪಡೆಯಲು ವಾರ್ಷಿಕ 5 ಸಾವಿರ ರೂ ಮೇಲೆ ಹಣ ನೀಡಬೇಕಿತ್ತು…ಆಗ ಟಿಸಿಪಿ/ಐಪಿ ಅಥವಾ ಡಿಜಿಟಲ್ ಅಕೌಂಟಿಗೆ ವಾರ್ಷಿಕ 15 ಸಾವರಿದಷ್ಟು ಫೀಸ್ ತೆರಬೇಕಿತ್ತು… ವಿಎಸ್‍ಎನ್‍ಎಲ್‍ಗೂ ಮೊದಲು 1990ರ ದಶಕದ ಮಧ್ಯಭಾದಲ್ಲಿ ‘ಅಕ್ಸೆಸ್ ಮೇಲ್’ ಇಮೇಲ್ ಸೇವೆ ಕೊಡುತ್ತಿತ್ತಾದರೂ, ಅದು ಕೆಲವೇ ಬುಲೆಟಿನ್ ಬೋರ್ಡ್ ಸೇವೆಗಳನ್ನು ಒಳಗೊಂಡಿತ್ತು…
ಸಾರಾಂಶ: ಒಂದು ಸುಳ್ಳು, ಅದರ ಹಿಂದೊಂದು ಸುಳ್ಳು…. ಮೋದಿ ಸಮರ್ಥಿಸಿಕೊಳ್ಳಲು ಹೋದವರೇ ನಾಚಿಕೆ ಪಡಬೇಕಾದ ಸ್ಥಿತಿ!

ಅಂದರೆ, ತಮಗೆ ಬೇಕಾದ ಮಾಧ್ಯಮಗಳಿಗೆ ಸಂದರ್ಶನ ನೀಡುವ ಡೇರ್‍ಡೆವಿಲ್ ಮೋದಿ, ಮೊದಲೇ ಸಂದರ್ಶಕರಿಂದ ಪ್ರಶ್ನೆ ಪಡೆದಿರುತ್ತಾರೆ. ಅಲ್ಲಿ ಯಾವ ಕಠಿಣ ಪ್ರಶ್ನೆಗಳೂ ಇರುವುದಿಲ್ಲ. ಮೋದಿ ಬಯಸಿದ ಪ್ರಶ್ನೆಗಳೇ ಇರುತ್ತವೆ. ಅದಕ್ಕ ಮೋದಿ ಉತ್ತರಗಳನ್ನು ಸಿದ್ಧ ಮಾಡಿಕೊಡು ಬಂದಿರುತ್ತಾರೆ!

ಇದು ಪಕೋಡಾ ಪ್ರಧಾನಿ ಪೇಯ್ಡ್ ಮೀಡಿಯಾಕ್ಕೆ ಪೇಪ್ಪರಮೆಂಟು ತಿನ್ನಿಸುವ, ಪೇಯ್ಡ್ ಮೀಡಿಯಾ ವೀಕ್ಷಕರು/ಓದುಗರನ್ನು ವಂಚಿಸುವ ಪರಿ… ಕಳೆದ 5 ವರ್ಷಗಳಿಂದ ಇದೇ ನಡೆದಿದೆ ಅಲ್ಲವೇ?
ಪೂರ್ಣ ಸಂದರ್ಶನಕ್ಕಾಗಿ ಈ ಕೆಳಗಿನ ವಿಡಿಯೋ ನೋಡಿ:

(ಆಧಾರ: thescroll.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...