Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...