Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...