Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...