Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...