Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...