Homeಮುಖಪುಟ'#ಮೋದಿ ಒಬ್ಬ ಹೇಡಿ' - ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

- Advertisement -
- Advertisement -

ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿರುವ ಬೆನ್ನಲ್ಲೆ, ಗುರುವಾರ ಮಧ್ಯರಾತ್ರಿಯಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಮತ್ತು ಮೋದಿಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಟ್ವಿಟರ್‌ನಲ್ಲಿ #FarmerTikaitVsModiDakait, #Modi_Khayar_Hy ಎಂದು ಟ್ರೆಂಡಿಂಗ್ ಆಗುತ್ತಿದೆ.

ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಈ ಎರಡೂ ಹ್ಯಾಶ್‌ಟ್ಯಾಗ್‌ಗಳು ಮೊದಲ ಸ್ಥಾನದಲ್ಲಿವೆ. #मोदी_कायर_हैं ಎನ್ನುವ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 9 ಲಕ್ಷಕ್ಕೂ ಹೆಚ್ಚು ಜನ ಟ್ವೀಟ್ ಮಾಡಿದ್ದರು. ಇದನ್ನು ಕೂಡಲೆ ಟ್ವಿಟರ್‌ನಿಂದ ಮರೆಮಾಚಲಾಗಿದೆ. ಆದರೆ ಇದು 6 ಲಕ್ಷ ಇದ್ದಾಗ ತೆಗೆದ ಸ್ಕ್ರೀನ್‌ಶಾಟ್ ಇಲ್ಲಿದೆ.

ಈ ವರದಿ ಬರೆಯುವ ವೇಳೆಗೆ #FarmerTikaitVsModiDakait ಎನ್ನುವ ಹ್ಯಾಶ್‌ಟ್ಯಾಗ್‌ ಬಳಸಿ ಸುಮಾರು 2 ಲಕ್ಷಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮುಜಫರ್ ನಗರದ ಸಿಸೌಲಿಯಲ್ಲಿರುವ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿಯು “ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಹೋರಾಟ ಬೆಂಬಲಿಸಲು ದೆಹಲಿಗೆ ಮೆರವಣಿಗೆ ಹೊರಡಲು ಸಿದ್ದ” ಎಂದು ಗುರುವಾರ ರಾತ್ರಿ ಘೋಷಿಸಿದ್ದರು.

ಗಾಜಿಪುರ್‌ ಗಡಿಯಲ್ಲಿ ರಾಕೇಶ್‌ ಟಿಕಾಯತ್‌ ರೈತ ಹೋರಾಟ ಮುಂದುವರೆಸುತ್ತಿದ್ದಾರೆ. ಆದರೆ ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಅಹಿತಕರ ಘಟನೆ ಜರುಗಿದ ನಂತರ ರೈತ ಹೋರಾಟ ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ಯತ್ನಿಸುತ್ತಿದ್ದು, ಇಂದು ಅವರು ಅಲ್ಲಿಂದ ತೆರವು ಮಾಡಬೇಕೆಂದು ಒತ್ತಾಯಿಸಿದ್ದರು. ಗಡಿಯ ಜನರಿಗೆ ನೀರು, ವಿದ್ಯುತ್‌ ಸಂಪರ್ಕ ಕಿತ್ತು ಹಾಕಲಾಗಿತ್ತು. ನಿನ್ನೆ ರಾತ್ರಿ ಕೆಲವೆಡೆ ಲಾಠೀ ಚಾರ್ಜ್‌ ಸಹ ಮಾಡಲಾಗಿತ್ತು.

ಇದನ್ನೂ ಓದಿ: ʼಬಾರ್ಡರ್‌ʼಗಳಲ್ಲಿ ರಾತ್ರಿ ಆಗಿದ್ದೇನು? – ಗ್ರೌಂಡ್‌ ರಿಪೋರ್ಟ್‌

ಇಂದು ಶತಾಯ ಗತಾಯ ರೈತರನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದಾಗ ರೈತ ಮುಖಂಡ ರಾಕೇಶ್‌ ಟಿಕಾಯತ್ ನಮ್ಮ ಮೇಲೆ ಗುಂಡು ಹಾರಿಸಿದರೂ ಸರಿಯೇ ಇಲ್ಲಿಂದ ಕದಲುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ಪೊಲೀಸರು ನಮ್ಮನ್ನು ತೆರವುಗೊಳಿಸಿದರೆ ನಮ್ಮ ಸಾವಿಗೆ ಅವರೇ ಕಾರಣರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಹಳಷ್ಟು ರೈತರು ಕೆರಳಿದ್ದು ಪೊಲೀಸರ ವಿರು‍ದ್ಧ ಹರಿಹಾಯ್ದಿದ್ದಾರೆ. ಅವರೆಲ್ಲರೂ ಸದ್ಯಕ್ಕೆ ಟಿಕಾಯತ್‌ ಮನೆ ಮುಂದೆ ಜಮಾಯಿಸಿ ಹೋರಾಟಕ್ಕೆ ಬೇಷರತ್‌ ಬೆಂಬಲ ಘೋಷಿಸಿದ್ದಾರೆ.

ಈ ಘಟನೆಯಿಂದ ಟ್ವಿಟರ್‌ನಲ್ಲಿ ರಾಕೇಶ್‌ ಟಿಕಾಯತ್ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೋಮ ರಾಮ್ ಮಲ್ಯ ಎಂಬುವವರು ಟ್ವೀಟ್ ಮಾಡಿ, “ನನ್ನ ಹಳ್ಳಿಯವರು ನೀರು ತಂದುಕೊಡುವವರೆಗೆ ನಾನು ನೀರನ್ನೂ ಕುಡಿಯುವುದಿಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ಇದು ಭಾರತೀಯ ರೈತರಿಗೆ ಸುಲಭವಲ್ಲ” ಎಂದು ಬರೆದುಕೊಂಡಿದ್ದಾರೆ.

ಮಯಂಕ್ ಎಂಬುವವರು ಟ್ವೀಟ್ ಮಾಡಿ, “ಕೆಂಪುಕೋಟೆಯ ಬಳಿ ನಡೆದ ಯೋಜಿತ ಪಿತೂರಿಯಿಂದ ರೈತರ ಹೋರಾಟವನ್ನು ಮಣಿಸಬಹುದು ಎಂದು ಅವರು ಭಾವಿಸಿದ್ದರು. ಈಗ ಅವರಿಗೆ ಒಗ್ಗಟ್ಟಿನ ಅರ್ಥ ಮತ್ತು ರೈತರ ಶಕ್ತಿಯ ಬಗ್ಗೆ ತಿಳಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ರಾಮ್ ಲಖನ್ ಸೆಹ್ರಾ ಟ್ವೀಟ್ ಮಾಡಿ, “ನೀನು ಇಂದು ಊಟ ಮಾಡುತ್ತಿದ್ದೀಯ ಎಂದರೆ ರೈತರಿಗೆ ಧನ್ಯವಾದ ಹೇಳು” ಎಂದು ಬರೆದುಕೊಂಡಿದ್ದಾರೆ.

ರವ್‌ನೀತ್ ಎಂಬುವವರು ಟ್ವೀಟ್ ಮಾಡಿ, “ನಮ್ಮ ಪೂರ್ವಜರು ಈ ದೇಶಕ್ಕಾಗಿ ನಿರ್ಮಿಸಿದ್ದವುಗಳನ್ನೆಲ್ಲಾ ಮೋದಿ ‘ಸ್ವಾಹ’ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಜನರನ್ನು ಪ್ರಚೋದಿಸುವ ಟಿವಿ ಕಾರ್ಯಕ್ರಮ ನಿಗ್ರಹಿಸಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಸುಭಮ್ ವರ್ಮಾ ಟ್ವೀಟ್ ಮಾಡಿ, “ಗೋದಿ ಮೀಡಿಯಾಗಳು ಇಂತಹ ವೀಡಿಯೋಗಳನ್ನು ತೋರಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೊರಡುತ್ತಿರುವವರಿಗೆ ಹೂಗಳಿಂದ ಸ್ವಾಗತ ಕೋರುತ್ತಿರುವ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಜನವರಿ 26 ರಂದು ನಡೆದ ರ್‍ಯಾಲಿಯಲ್ಲಿ ಕೆಲವು ರೈತರ ಗುಂಪೊಂದು ಕೆಂಪುಕೋಟೆಗೆ ನುಗ್ಗಿ ಸಿಖ್ ಧರ್ಮದ ಧ್ವಜವನ್ನು ಹಾರಿಸಿತ್ತು. ಇದು ದೇಶದಾದ್ಯಂತ ಸಂಚಲನ ಉಂಟುಮಾಡಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ನಡೆಸಿದ ಪಿತೂರಿ ಎಂದು ರೈತ ಸಂಘಟನೆಗಳು ಆರೋಪಿಸಿದ್ದವು. ಜೊತೆಗೆ ಪರ-ವಿರೋಧದ ಚರ್ಚೆಗೂ ಕಾರಣವಾಗಿತ್ತು. ಹಾಗೇಯೇ ಪ್ರತಿಭಟನೆಯ ವಿರುದ್ಧ ಇದ್ದ ಜನರಿಗಂತು ಇದು ಮೃಷ್ಟಾನ್ನ ಭೋಜನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ.

ಅದೇನೇ ಇದ್ದರೂ ರಾಷ್ಟ್ರ ರಾಜಧಾನಿಯ ಗಡಿಯಲ್ಲಿರುಯವ ರೈತರು ಮಾತ್ರ ಎದೆಗುಂದದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಪ್ರಕರಣ: ದೇಶದ್ರೋಹ ಪ್ರಕರಣ ದಾಖಲು – ತಲೆಮರೆಸಿಕೊಂಡ ನಟ ದೀಪು ಸಿಧು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...