Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...