Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...