Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...