Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....