Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...