Homeಮುಖಪುಟಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

ಮೋದಿ ಸ್ವಯಂ ವೈಭವೀಕರಣದ ಸರ್ವಾಧಿಕಾರಿ: ನೂತನ ಸಂಸತ್‌ ಉದ್ಘಾಟನೆ ಬಳಿಕ ಪ್ರತಿಪಕ್ಷಗಳ ಟೀಕಾಪ್ರಹಾರ

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿದ ಕೆಲವೇ ಗಂಟೆಗಳ ನಂತರ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಸಂಪೂರ್ಣ ತಿರಸ್ಕಾರ ಹೊಂದಿರುವ, ಸ್ವಯಂ ವೈಭವೀಕರಣ ಮಾಡಿಕೊಳ್ಳುವ ಸರ್ವಾಧಿಕಾರಿ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ” ಎಂದು ಕುಟುಕಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಮೋದಿಯವರೇ ನೂತನ ಸಂಸತ್‌ ಭವನವನ್ನು ಉದ್ಘಾಟಿಸುವ ನಿರ್ಧಾರನ್ನು ಇಪ್ಪತ್ತು ಪ್ರತಿಪಕ್ಷಗಳು ವಿರೋಧಿಸಿವೆ. “ಇದು ಗಂಭೀರ ಮತ್ತು ಅವಮಾನ ಮಾತ್ರವಲ್ಲ, ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ” ಎಂದು ಸಮಾರಂಭವನ್ನು ಬಹಿಷ್ಕರಿಸಿದ್ದವು. ಆದಿವಾಸಿ ಮಹಿಳೆ ಮುರ್ಮು ಅವರನ್ನು ಬಿಜೆಪಿ ಹೊರಗಿಟ್ಟಿದೆ ಎಂದು ಕಿಡಿಕಾರಿದ್ದವು.

ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ಉದ್ಘಾಟನಾ ಸಮಾರಂಭವನ್ನು ಆಯೋಜಿಸಿರುವುದೂ ಟೀಕೆಗೆ ಗುರಿಯಾಗಿದೆ.

“ಮುರ್ಮು ಅವರ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಲು ಅವಕಾಶವಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ. “ಸಂಸತ್ತಿಗೆ ಅಪರೂಪಕ್ಕೆ ಹಾಜರಾಗುವ ಅಥವಾ ಅದರಲ್ಲಿ ತೊಡಗಿಸಿಕೊಳ್ಳುವ ಪ್ರಧಾನ ಮಂತ್ರಿಯವರು 2023ರಲ್ಲಿ ಹೊಸ ಸಂಸತ್ತಿನ ಕಟ್ಟಡ ಉದ್ಘಾಟಿಸಿದ್ದಾರೆ” ಎಂದು ಕುಟುಕಿದ್ದಾರೆ.

ಲೋಕಸಭೆಯ ಸಭಾಂಗಣದಲ್ಲಿ ಮೋದಿಯವರು ತಂದಿರಿಸಿರುವ ಸೆಂಗೋಲ್ ಅಥವಾ ರಾಜದಂಡದ ವಿವಾದವನ್ನು ಅವರು ಉಲ್ಲೇಖಿಸಿದ್ದಾರೆ.

“1947ರಲ್ಲಿ ಅಧಿಕಾರ ವರ್ಗಾವಣೆಯ ಸಂಕೇತವಾಗಿ ರಾಜದಂಡವನ್ನು ಬ್ರಿಟಿಷ್ ವೈಸರಾಯ್ ಲೂಯಿಸ್ ಮೌಂಟ್‌ಬ್ಯಾಟನ್ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ನೀಡಿದ್ದರು” ಎಂದು ಬಿಜೆಪಿ ಪ್ರತಿಪಾದಿಸಿದೆ. ಆದರೆ ಬಿಜೆಪಿ ಹೇಳುತ್ತಿರುವ ಇತಿಹಾಸ ಸಂಶಯಗಳಿಗೆ ಆಸ್ಪದ ನೀಡಿದೆ.

“ಹೊಸ ಕಟ್ಟಡದ ಉದ್ಘಾಟನೆಯನ್ನು ಪಟ್ಟಾಭಿಷೇಕದ ಸಮಾರಂಭ ಎಂದು ಮೋದಿ ಪರಿಗಣಿಸಿದ್ದಾರೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಬಣ್ಣಿಸಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಎಎನ್‌ಐಗೆ ಪ್ರತಿಕ್ರಿಯಿಸಿ, “ಕಾರ್ಯಕ್ರಮಕ್ಕೆ ಹಾಜರಾಗದಿರುವ ನಿರ್ಧಾರದಿಂದ ಸಂತೋಷವಾಗಿದೆ” ಎಂದಿದ್ದಾರೆ. “ನಾವು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದೇವೆಯೇ? ಈ ಕಾರ್ಯಕ್ರಮ ಸೀಮಿತ ಜನರಿಗೆ ಮಾತ್ರವೇ?” ಎಂದು ಪ್ರಶ್ನಿಸಿದ್ದಾರೆ.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಸಂಸತ್ತನ್ನು ಅಪಹಾಸ್ಯ ಮಾಡಿದೆ, ಅವಮಾನಿಸಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರೇನ್ ಆರೋಪಿಸಿದ್ದಾರೆ.

“ಸಂಸತ್ತಿನ ಎಂಟು ಅಧಿವೇಶನಗಳನ್ನು ನಿಗದಿತ ದಿನಾಂಕಕ್ಕಿಂತ ಮುಂಚಿತವಾಗಿ ಮುಂದೂಡಲಾಗಿದೆ. ವಿರೋಧ ಪಕ್ಷದ ಸದಸ್ಯರಿಗಿರುವ ಮಸೂದೆಗಳ ಮೇಲಿನ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ನಾಲ್ಕು ವರ್ಷ ಕಳೆದರೂ ಲೋಕಸಭೆಯಲ್ಲಿ ಉಪಸಭಾಪತಿಯೇ ಇಲ್ಲ. ನಮ್ಮ ಶ್ರೇಷ್ಠ ಸಂಸದೀಯ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದನ್ನು ನಿಲ್ಲಿಸಿ” ಎಂದು ಆಗ್ರಹಿಸಿದ್ದಾರೆ.

ಎಡಪಕ್ಷಗಳ ಟೀಕೆ

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿ, “ದೊಡ್ಡದಾದ ಪ್ರೊಪಗಾಂಡ ನಡುವೆ ಉದ್ಘಾಟನಾ ಸಮಾರಂಭವನ್ನು ನಡೆಸಲಾಯಿತು” ಎಂದು ಬರೆದುಕೊಂಡಿದ್ದಾರೆ.

“ಸೆಂಗೋಲ್ ಎಂಬುದು ಊಳಿಗಮಾನ್ಯ ರಾಜಪ್ರಭುತ್ವದ ಅವಧಿಗೆ ಸೇರಿದೆ. ಭಾರತೀಯ ಜನರು ಅಂತಹ ಬಂಧನಗಳನ್ನು ಕಿತ್ತೊಗೆದು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯಕ್ಕೆ ನಾಂದಿ ಹಾಡಿದ್ದಾರೆ. ಅಲ್ಲಿ ಪ್ರತಿಯೊಬ್ಬ ನಾಗರಿಕರು ಸಮಾನರು. ಜನರಿಂದ ಆಯ್ಕೆಯಾಗುವ ಸರ್ಕಾರ ಮತ್ತು ಪ್ರಜಾಪ್ರಭುತ್ವದಲ್ಲಿ ಸೆಂಗೋಲ್‌ನ ಪಾತ್ರವಿಲ್ಲ” ಎಂದು ತಿಳಿಸಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ಸಂಸದ ಬಿನೋಯ್ ವಿಶ್ವಂ ಪ್ರತಿಕ್ರಿಯಿಸಿ, “ಕುಸ್ತಿಪಟುಗಳಿಗೆ ಹೊಡೆಯುವ ಸಂದರ್ಭದಲ್ಲಿ ಬಂದಿರುವ ಸೆಂಗೋಲ್‌ಗೆ ನಮಸ್ಕಾರಗಳು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾರತದ ಪ್ರಮುಖ ಕ್ರೀಡಾಪಟುಗಳನ್ನು ಇಂದು ನೂತನ ಸಂಸತ್ ಭವನದ ಕಡೆಗೆ ಮೆರೆವಣಿಗೆ ಹೊರಟಿದ್ದಾಗ ಬಂಧಿಸಲಾಗಿದೆ. ಪ್ರಖ್ಯಾತ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಮನಕಲಕುವಂತಿವೆ.

“ಈ ಆರಂಭವು ಹೊಸ ಸಂಸತ್ತಿನ ಹಾದಿಗೆ ಸಾಕ್ಷಿಯಾಗಿದೆ. ನಿರ್ದಯ ಫ್ಯಾಸಿಸ್ಟ್ ನಿರಂಕುಶಪ್ರಭುತ್ವ ಕಾಣುತ್ತಿದೆ. ಪ್ರಧಾನಿಯವರು ಸಾವರ್ಕರ್ ಅವರ ಮುಂದೆ ನಮಸ್ಕರಿಸಿದಾಗ, ದೇಶವು ಅವರ [ಸಾವರ್ಕರ್] ಕ್ಷಮಾದಾನ ಅರ್ಜಿಗಳನ್ನು ನೆನಪಿಸಿಕೊಂಡಿತು. ಅವರು ಹೊಸ ಸಂಸತ್ತನ್ನು [ಗೌತಮ್] ಅದಾನಿ ಮತ್ತು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಾಡಲು ಬಳಸಲು ಪ್ರಯತ್ನಿಸುತ್ತಾರೆ. ನಾವು ಅದರ ವಿರುದ್ಧ ಹೋರಾಡುತ್ತೇವೆ” ಎಂದು ವಿಶ್ವಂ ಹೇಳಿದ್ದಾರೆ.

ಇದನ್ನೂ ಓದಿರಿ: ಜಂತರ್‌ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ಕುಸ್ತಿಪಟುಗಳ ಬಂಧನ; ಎತ್ತ ಸಾಗುತ್ತಿದೆ ಭಾರತ?

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್ ದೀಪಂಕರ್ ಭಟ್ಟಾಚಾರ್ಯ ಅವರು ಪ್ರತಿಕ್ರಿಯಿಸಿ, “ಹೊಸ ಸಂಸತ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ರಾಜನ ಪಟ್ಟಾಭಿಷೇಕದಂತೆ ಕಂಡಿತು” ಎಂದು ಟೀಕಿಸಿದ್ದಾರೆ.

“ಮಹಿಳಾ ಮಹಾಪಂಚಾಯತ್ ನಡೆಸಲು ಮುಂದಾಗಿದ್ದ ಮಹಿಳಾ ಕುಸ್ತಿಪಟುಗಳು ಮತ್ತು ಇತರ ನಾಗರಿಕರ ಮೇಲೆ ದೆಹಲಿಯಲ್ಲಿ ಭಾರೀ ದಬ್ಬಾಳಿಕೆ ನಡೆದಿದೆ. ಪ್ರಜಾಪ್ರಭುತ್ವ, ಸಾಂವಿಧಾನಿಕ ಮನೋಭಾವ ಮತ್ತು ದೃಷ್ಟಿಕೋನದ ಮೇಲೆ ಕ್ರೂರ ಆಕ್ರಮಣ ಜರುಗಿದೆ” ಎಂದು ವಿಷಾದಿಸಿದ್ದಾರೆ.

ಆರ್‌ಜೆಡಿ ಟ್ವೀಟ್‌ ಗದ್ದಲ

ಇದರ ನಡುವೆ ಹೊಸ ಸಂಸತ್ ಕಟ್ಟಡದ ಆಕಾರವನ್ನು ಶವಪೆಟ್ಟಿಗೆಯ ಆಕಾರಕ್ಕೆ ಹೋಲಿಸಿ ರಾಷ್ಟ್ರೀಯ ಜನತಾ ದಳ ಟ್ವೀಟ್‌ ಮಾಡಿರುವುದು ವಿವಾದಕ್ಕೆ ಗುರಿಯಾಗಿದೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪ್ರತಿಕ್ರಿಯಿಸಿ, “ದೇಶದ ಜನರು 2024ರಲ್ಲಿ ನಿಮ್ಮನ್ನು ಅದೇ ಶವಪೆಟ್ಟಿಗೆಯಲ್ಲಿ ಹೂಳುತ್ತಾರೆ. ಪ್ರಜಾಪ್ರಭುತ್ವದ ಹೊಸ ದೇವಾಲಯವನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡುವುದಿಲ್ಲ” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಶಕ್ತಿ ಸಿಂಗ್ ಯಾದವ್ ಪ್ರತಿಕ್ರಿಯಿಸಿ, “ಟ್ವೀಟ್‌ನಲ್ಲಿರುವ ಶವಪೆಟ್ಟಿಗೆಯು ಪ್ರಜಾಪ್ರಭುತ್ವವನ್ನು ಸಮಾಧಿ ಮಾಡುತ್ತಿರುವುದನ್ನು ಪ್ರತಿನಿಧಿಸುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...