Homeಕರೋನಾ ತಲ್ಲಣ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ...

‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊರೋನಾ ‘ಸೂಪರ್ ಸ್ಪ್ರೆಡರ್’ ಎಂದು ಟೀಕಿಸಿದ್ದು ಕೋವಿಡ್ 2ನೆ ಅಲೆಗೆ ಮೋದಿಯವರೇ ಕಾರಣ ಎಂದು ಆರೋಪಿಸಿದ್ದಾರೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಡಾ ದಹಿಯಾ ದಿ ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ಆರೋಗ್ಯ ಬಿಕ್ಕಟ್ಟಿನ ತೀವ್ರತೆಯ ಹೊರತಾಗಿಯೂ, ಚುನಾವಣಾ ರ‍್ಯಾಲಿಗಳು ಮತ್ತು ಹರಿದ್ವಾರದಲ್ಲಿನ ಕುಂಭಮೇಳದಂತಹ ಧಾರ್ಮಿಕ ಸಭೆಗಳು ಮುಂದುವರೆದವು, ಇದು, ಮಾರಣಾಂತಿಕ ವೈರಸ್ ಹರಡುವುದನ್ನು ನಿಭಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗಂಭೀರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.

“ವೈದ್ಯಕೀಯ ಆಮ್ಲಜನಕದ ಕೊರತೆಯು ದೇಶದ ಪ್ರತಿಯೊಂದು ಭಾಗದಲ್ಲೂ ಅನೇಕ ರೋಗಿಗಳ ಸಾವಿಗೆ ಕಾರಣವಾಗಿದೆ, ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಲವಾರು ಯೋಜನೆಗಳು ಇನ್ನೂ ಕೇಂದ್ರ ಸರ್ಕಾರದಲ್ಲಿ ಬಾಕಿ ಉಳಿದಿವೆ, ಆದರೆ ಇಂತಹ ಪ್ರಮುಖ ಅಗತ್ಯಕ್ಕೆ ಮೋದಿ ಸರ್ಕಾರ ಯಾವುದೇ ಗಮನ ನೀಡಲಿಲ್ಲ’ ಎಂದು ದಹಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲ ನಗರದ ಆಸ್ಪತ್ರೆಗಳಲ್ಲಿ ಭರ್ತಿಯಾಗುತ್ತಿರುವ ಶವಾಗಾರಗಳು ಮತ್ತು ಆಸ್ಪತ್ರೆಗಳ ಹೊರಗಿನ ಆಂಬುಲೆನ್ಸ್‌ಗಳ ಉದ್ದದ ಸಾಲುಗಳಲ್ಲಿ ಸಾಂಕ್ರಾಮಿಕ ರೋಗವು ದೇಶಾದ್ಯಂತ ಹರಡಿದ್ದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ತಮ್ಮ ವೈಫಲ್ಯವನ್ನು ಖಾಸಗಿ ವೈದ್ಯಕೀಯ ವಲಯ ಮತ್ತು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲು ಯತ್ನಿಸಿದ ಪ್ರಧಾನಮಂತ್ರಿಯವರ ವಿರುದ್ಧ ಡಾ. ದಹಿಯಾ ಕಿಡಿ ಕಾರಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧ ನಿಂತ ರೈತರ ಆಂದೋಲನದ ವಿಷಯದಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರೀತಿಯಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸದೆ ರೈತರು ಬೃಹತ್ ಸಂಖ್ಯೆಯಲ್ಲಿ ಸೇರುವುದಕ್ಕೆ ಕಾರಣರಾದ ಮೋದಿ, ಕೋವಿಡ್ ಹರಡುವಿಕೆಯ ಸಾಧ್ಯತೆಯನ್ನು ಹೆಚ್ಚಿಸಿದರು ಎಂದು ದಹಿಯಾ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಎರಡನೇ ಅಲೆಯನ್ನು ಮೋದಿ ಮತ್ತು ಅವರ ಸರ್ಕಾರವು ನಿರ್ವಹಿಸುತ್ತಿರುವುದನ್ನು ಜಾಗತಿಕ ಸುದ್ದಿ ಸಂಸ್ಥೆಗಳು ವ್ಯಾಪಕವಾಗಿ ಟೀಕಿಸಿವೆ.
ಸದ್ಯ ದೈನಿಕ ಕೇಸುಗಳ ಸಂಖ್ಯೆ 3.6 ಲಕ್ಷವನ್ನು ದಾಟಿದೆ ಮತ್ತು ದೈನಿಕ ಸಾವುಗಳ ಸಂಖ್ಯೆ 3 ಸಾವಿರದಷ್ಟಿದೆ.


ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Why not every district responsible person is suing against the district authority who suppose to control the religious. Election. Many other gatherings. They are the main responsible allowed the gathering

  2. Modi controlled election commission to have election in many phases to help them but failed to anticipate second wave.
    Even Pakistan has done better in controlling second wave of Covid-19.
    Now time has come to replace Modi govt and his supporters by responsibly voting for nation building people.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...