Homeಕರೋನಾ ತಲ್ಲಣ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ...

‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಕೊರೋನಾ ‘ಸೂಪರ್ ಸ್ಪ್ರೆಡರ್’ ಎಂದು ಟೀಕಿಸಿದ್ದು ಕೋವಿಡ್ 2ನೆ ಅಲೆಗೆ ಮೋದಿಯವರೇ ಕಾರಣ ಎಂದು ಆರೋಪಿಸಿದ್ದಾರೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಡಾ ದಹಿಯಾ ದಿ ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ಆರೋಗ್ಯ ಬಿಕ್ಕಟ್ಟಿನ ತೀವ್ರತೆಯ ಹೊರತಾಗಿಯೂ, ಚುನಾವಣಾ ರ‍್ಯಾಲಿಗಳು ಮತ್ತು ಹರಿದ್ವಾರದಲ್ಲಿನ ಕುಂಭಮೇಳದಂತಹ ಧಾರ್ಮಿಕ ಸಭೆಗಳು ಮುಂದುವರೆದವು, ಇದು, ಮಾರಣಾಂತಿಕ ವೈರಸ್ ಹರಡುವುದನ್ನು ನಿಭಾಯಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗಂಭೀರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.

“ವೈದ್ಯಕೀಯ ಆಮ್ಲಜನಕದ ಕೊರತೆಯು ದೇಶದ ಪ್ರತಿಯೊಂದು ಭಾಗದಲ್ಲೂ ಅನೇಕ ರೋಗಿಗಳ ಸಾವಿಗೆ ಕಾರಣವಾಗಿದೆ, ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಲವಾರು ಯೋಜನೆಗಳು ಇನ್ನೂ ಕೇಂದ್ರ ಸರ್ಕಾರದಲ್ಲಿ ಬಾಕಿ ಉಳಿದಿವೆ, ಆದರೆ ಇಂತಹ ಪ್ರಮುಖ ಅಗತ್ಯಕ್ಕೆ ಮೋದಿ ಸರ್ಕಾರ ಯಾವುದೇ ಗಮನ ನೀಡಲಿಲ್ಲ’ ಎಂದು ದಹಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಎಲ್ಲ ನಗರದ ಆಸ್ಪತ್ರೆಗಳಲ್ಲಿ ಭರ್ತಿಯಾಗುತ್ತಿರುವ ಶವಾಗಾರಗಳು ಮತ್ತು ಆಸ್ಪತ್ರೆಗಳ ಹೊರಗಿನ ಆಂಬುಲೆನ್ಸ್‌ಗಳ ಉದ್ದದ ಸಾಲುಗಳಲ್ಲಿ ಸಾಂಕ್ರಾಮಿಕ ರೋಗವು ದೇಶಾದ್ಯಂತ ಹರಡಿದ್ದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಟ್ರಿಬ್ಯೂನ್‌ಗೆ ತಿಳಿಸಿದ್ದಾರೆ.

ತಮ್ಮ ವೈಫಲ್ಯವನ್ನು ಖಾಸಗಿ ವೈದ್ಯಕೀಯ ವಲಯ ಮತ್ತು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಲು ಯತ್ನಿಸಿದ ಪ್ರಧಾನಮಂತ್ರಿಯವರ ವಿರುದ್ಧ ಡಾ. ದಹಿಯಾ ಕಿಡಿ ಕಾರಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧ ನಿಂತ ರೈತರ ಆಂದೋಲನದ ವಿಷಯದಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರೀತಿಯಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸದೆ ರೈತರು ಬೃಹತ್ ಸಂಖ್ಯೆಯಲ್ಲಿ ಸೇರುವುದಕ್ಕೆ ಕಾರಣರಾದ ಮೋದಿ, ಕೋವಿಡ್ ಹರಡುವಿಕೆಯ ಸಾಧ್ಯತೆಯನ್ನು ಹೆಚ್ಚಿಸಿದರು ಎಂದು ದಹಿಯಾ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಡ್ ಎರಡನೇ ಅಲೆಯನ್ನು ಮೋದಿ ಮತ್ತು ಅವರ ಸರ್ಕಾರವು ನಿರ್ವಹಿಸುತ್ತಿರುವುದನ್ನು ಜಾಗತಿಕ ಸುದ್ದಿ ಸಂಸ್ಥೆಗಳು ವ್ಯಾಪಕವಾಗಿ ಟೀಕಿಸಿವೆ.
ಸದ್ಯ ದೈನಿಕ ಕೇಸುಗಳ ಸಂಖ್ಯೆ 3.6 ಲಕ್ಷವನ್ನು ದಾಟಿದೆ ಮತ್ತು ದೈನಿಕ ಸಾವುಗಳ ಸಂಖ್ಯೆ 3 ಸಾವಿರದಷ್ಟಿದೆ.


ಇದನ್ನೂ ಓದಿ: 8 ಸಾವುಗಳಾದರೂ ಎಚ್ಚೆತ್ತುಕೊಳ್ಳದ ಕೋಲಾರದ ಜಿಲ್ಲಾಸ್ಪತ್ರೆ: ಅಲ್ಲೆ ದಾಖಲಾಗಿರುವ ಮಹಿಳಾ ಮುಖಂಡೆ ವಿ.ಗೀತಾ ಆಕ್ರೋಶ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Why not every district responsible person is suing against the district authority who suppose to control the religious. Election. Many other gatherings. They are the main responsible allowed the gathering

  2. Modi controlled election commission to have election in many phases to help them but failed to anticipate second wave.
    Even Pakistan has done better in controlling second wave of Covid-19.
    Now time has come to replace Modi govt and his supporters by responsibly voting for nation building people.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...