Homeಕರ್ನಾಟಕ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ರೋಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.‌ಪಾಟೀಲ ಅವರ ಪರ ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಖರ್ಗೆಯವರು ಮಾತನಾಡಿದ್ದಾರೆ.

ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಅವರು, “ಮೋದಿ ಒಬ್ಬ ಆಸೆಬುರುಕ ಮನುಷ್ಯ. ಯಾವುದಾದರೂ ಕುರ್ಚಿ ಖಾಲಿ ಇದ್ದರೆ ಅಲ್ಲಿ ಬಂದು ಕುಳಿತುಕೊಳ್ಳುತ್ತಾನೆ. ತಾನು ತಿನ್ನಲ್ಲ ತಿನ್ನಲ್ಲ, ತಿನ್ನೋಕೆ ಬಿಡಲ್ಲ ಎಂದು ಹೇಳುತ್ತಾನೆ. ಆದರೆ, ಶೇ 40ರಷ್ಟು ಲಂಚ ತಿಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ರಾಜಕೀಯ ಮಾಡುತ್ತಾನೆ. ಆತ ದೇಶವನ್ನು ತನ್ನ ವಿಚಾರಧಾರೆಯಿಂದ ಹಾಳು ಮಾಡಲು ಬಂದಿದ್ದಾನೆ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಸಂಸತ್‌ನಲ್ಲಿ ಪ್ರಶ್ನೆ ಮಾಡಿದರೆ 56 ಇಂಚಿನ ಎದೆ ಬಗ್ಗೆ ಹೇಳುತ್ತಾರೆ. ನಾವು ಅವರ ದೇಹದಾರ್ಢ್ಯತೆ ಕೇಳುತ್ತಿಲ್ಲ. ಅವರು ಮಾಡಿರುವ ಜನಪರ, ಅಭಿವೃದ್ಧಿಪರ ಕೆಲಸಗಳನ್ನು ಅಳತೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನ ದಂಗೆ ಏಳುತ್ತಾರೆ ಎಂದು ಹೇಳುವ ಮೂಲಕ ಅಮಿತ್‌ ಶಾ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇಲ್ಲಿಯವರೆಗೆ ದಂಗೆಗಳು ನಡೆದಿರುವುದು ಗುಜರಾತ್‌ನಲ್ಲಿ ಮಾತ್ರ” ಎಂದು ತಿಳಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ರಾಷ್ಟ್ರಸೇವೆಯನ್ನೇ ತನ್ನ ಜೀವನದ ಪರಮ ಧ್ಯೇಯವನ್ನಾಗಿಸಿಕೊಂಡು ಶ್ರಮಿಸುತ್ತಿರುವ, ಹಿಂದುಳಿದ ಸಮುದಾಯದ ನರೇಂದ್ರಮೋದಿಯವರನ್ನು ‘ಮೌತ್ ಕಿ ಸೌದಾಗರ್’ ‘ರಾವಣ’, ‘ನೀಚ ವ್ಯಕ್ತಿ’ ಎಂದೆಲ್ಲಾ ನಿಂದಿಸಿ, ಇದೀಗ ಸೋಲುವ ಹತಾಶೆಯಿಂದ ಖರ್ಗೆಯವರು ವಿಷಸರ್ಪ ಎನ್ನುವ ಮೂಲಕ ಕಾಂಗ್ರೆ ಸ್‌ನ ವಿಕೃತ ಮನಸ್ಥಿತಿಯನ್ನು ಸ್ವಯಂ ಬಯಲು ಮಾಡಿದ್ದಾರೆೆ” ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

“ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ. ಖರ್ಗೆಯವರ ಹೇಳಿಕೆಗೆ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು” ಎಂದು ಕೇಂದ್ರ ಸಚಿವ ಅನುರಾಗ್ ಒತ್ತಾಯಿಸಿದ್ದಾರೆ.

ತಮ್ಮ ಹೇಳಿಕೆಗೆ ಖರ್ಗೆಯವರು ಸ್ಪಷ್ಟನೆಯನ್ನು ನೀಡಿದ್ದಾರೆ. “ಬಿಜೆಪಿ ಪಾರ್ಟಿ ಹಾವು ಇದ್ದ ಹಾಗೆ. ಸ್ವಲ್ಪ ನೆಕ್ಕಿ ನೋಡುತ್ತೇವೆ ಅಂದರೂ ಸಾವು ಖಚಿತ ಎಂಬರ್ಥದಲ್ಲಿ ಹೇಳಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಈ ಮಾತು ಹೇಳಿಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ” ಎಂದು ತಿಳಿಸಿದ್ದಾರೆ.

“ಬಿಜೆಪಿಯವರ ಮಾಡಿದ ಭ್ರಷ್ಟಚಾರಗಳು ಅಷ್ಟಿಷ್ಟಲ್ಲ. ಅವುಗಳ ಬಗ್ಗೆ ಹೇಳಿದರೆ ಇಡಿ, ಐಟಿ ಅಸ್ತ್ರಗಳನ್ನು ಬಳಕೆ ಮಾಡಿ ಹೆದರಿಸುವುದು ಸರ್ವೇ ಸಾಮಾನ್ಯವಾಗಿದೆ. ಆದ್ದರಿಂದ ಮೋದಿ ಸರ್ಕಾರ ಒಂದು ವಿಷಯುಕ್ತ ಹಾವಿನಂತಿದೆ. ಬಿಜೆಪಿ ಐಡಿಯಾಲಾಜಿ ವಿಷದಂತಿದೆ. ಅದನ್ನು ನೀವು ಬೆಂಬಲಿಸುತ್ತೇವೆ ಅಂದರೆ ಸಾವು ಖಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...