Homeಕರ್ನಾಟಕ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ರೋಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.‌ಪಾಟೀಲ ಅವರ ಪರ ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಖರ್ಗೆಯವರು ಮಾತನಾಡಿದ್ದಾರೆ.

ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಅವರು, “ಮೋದಿ ಒಬ್ಬ ಆಸೆಬುರುಕ ಮನುಷ್ಯ. ಯಾವುದಾದರೂ ಕುರ್ಚಿ ಖಾಲಿ ಇದ್ದರೆ ಅಲ್ಲಿ ಬಂದು ಕುಳಿತುಕೊಳ್ಳುತ್ತಾನೆ. ತಾನು ತಿನ್ನಲ್ಲ ತಿನ್ನಲ್ಲ, ತಿನ್ನೋಕೆ ಬಿಡಲ್ಲ ಎಂದು ಹೇಳುತ್ತಾನೆ. ಆದರೆ, ಶೇ 40ರಷ್ಟು ಲಂಚ ತಿಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ರಾಜಕೀಯ ಮಾಡುತ್ತಾನೆ. ಆತ ದೇಶವನ್ನು ತನ್ನ ವಿಚಾರಧಾರೆಯಿಂದ ಹಾಳು ಮಾಡಲು ಬಂದಿದ್ದಾನೆ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಸಂಸತ್‌ನಲ್ಲಿ ಪ್ರಶ್ನೆ ಮಾಡಿದರೆ 56 ಇಂಚಿನ ಎದೆ ಬಗ್ಗೆ ಹೇಳುತ್ತಾರೆ. ನಾವು ಅವರ ದೇಹದಾರ್ಢ್ಯತೆ ಕೇಳುತ್ತಿಲ್ಲ. ಅವರು ಮಾಡಿರುವ ಜನಪರ, ಅಭಿವೃದ್ಧಿಪರ ಕೆಲಸಗಳನ್ನು ಅಳತೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನ ದಂಗೆ ಏಳುತ್ತಾರೆ ಎಂದು ಹೇಳುವ ಮೂಲಕ ಅಮಿತ್‌ ಶಾ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇಲ್ಲಿಯವರೆಗೆ ದಂಗೆಗಳು ನಡೆದಿರುವುದು ಗುಜರಾತ್‌ನಲ್ಲಿ ಮಾತ್ರ” ಎಂದು ತಿಳಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ರಾಷ್ಟ್ರಸೇವೆಯನ್ನೇ ತನ್ನ ಜೀವನದ ಪರಮ ಧ್ಯೇಯವನ್ನಾಗಿಸಿಕೊಂಡು ಶ್ರಮಿಸುತ್ತಿರುವ, ಹಿಂದುಳಿದ ಸಮುದಾಯದ ನರೇಂದ್ರಮೋದಿಯವರನ್ನು ‘ಮೌತ್ ಕಿ ಸೌದಾಗರ್’ ‘ರಾವಣ’, ‘ನೀಚ ವ್ಯಕ್ತಿ’ ಎಂದೆಲ್ಲಾ ನಿಂದಿಸಿ, ಇದೀಗ ಸೋಲುವ ಹತಾಶೆಯಿಂದ ಖರ್ಗೆಯವರು ವಿಷಸರ್ಪ ಎನ್ನುವ ಮೂಲಕ ಕಾಂಗ್ರೆ ಸ್‌ನ ವಿಕೃತ ಮನಸ್ಥಿತಿಯನ್ನು ಸ್ವಯಂ ಬಯಲು ಮಾಡಿದ್ದಾರೆೆ” ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

“ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ. ಖರ್ಗೆಯವರ ಹೇಳಿಕೆಗೆ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು” ಎಂದು ಕೇಂದ್ರ ಸಚಿವ ಅನುರಾಗ್ ಒತ್ತಾಯಿಸಿದ್ದಾರೆ.

ತಮ್ಮ ಹೇಳಿಕೆಗೆ ಖರ್ಗೆಯವರು ಸ್ಪಷ್ಟನೆಯನ್ನು ನೀಡಿದ್ದಾರೆ. “ಬಿಜೆಪಿ ಪಾರ್ಟಿ ಹಾವು ಇದ್ದ ಹಾಗೆ. ಸ್ವಲ್ಪ ನೆಕ್ಕಿ ನೋಡುತ್ತೇವೆ ಅಂದರೂ ಸಾವು ಖಚಿತ ಎಂಬರ್ಥದಲ್ಲಿ ಹೇಳಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಈ ಮಾತು ಹೇಳಿಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ” ಎಂದು ತಿಳಿಸಿದ್ದಾರೆ.

“ಬಿಜೆಪಿಯವರ ಮಾಡಿದ ಭ್ರಷ್ಟಚಾರಗಳು ಅಷ್ಟಿಷ್ಟಲ್ಲ. ಅವುಗಳ ಬಗ್ಗೆ ಹೇಳಿದರೆ ಇಡಿ, ಐಟಿ ಅಸ್ತ್ರಗಳನ್ನು ಬಳಕೆ ಮಾಡಿ ಹೆದರಿಸುವುದು ಸರ್ವೇ ಸಾಮಾನ್ಯವಾಗಿದೆ. ಆದ್ದರಿಂದ ಮೋದಿ ಸರ್ಕಾರ ಒಂದು ವಿಷಯುಕ್ತ ಹಾವಿನಂತಿದೆ. ಬಿಜೆಪಿ ಐಡಿಯಾಲಾಜಿ ವಿಷದಂತಿದೆ. ಅದನ್ನು ನೀವು ಬೆಂಬಲಿಸುತ್ತೇವೆ ಅಂದರೆ ಸಾವು ಖಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...