Homeಕರ್ನಾಟಕ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ರೋಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.‌ಪಾಟೀಲ ಅವರ ಪರ ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಖರ್ಗೆಯವರು ಮಾತನಾಡಿದ್ದಾರೆ.

ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಅವರು, “ಮೋದಿ ಒಬ್ಬ ಆಸೆಬುರುಕ ಮನುಷ್ಯ. ಯಾವುದಾದರೂ ಕುರ್ಚಿ ಖಾಲಿ ಇದ್ದರೆ ಅಲ್ಲಿ ಬಂದು ಕುಳಿತುಕೊಳ್ಳುತ್ತಾನೆ. ತಾನು ತಿನ್ನಲ್ಲ ತಿನ್ನಲ್ಲ, ತಿನ್ನೋಕೆ ಬಿಡಲ್ಲ ಎಂದು ಹೇಳುತ್ತಾನೆ. ಆದರೆ, ಶೇ 40ರಷ್ಟು ಲಂಚ ತಿಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ರಾಜಕೀಯ ಮಾಡುತ್ತಾನೆ. ಆತ ದೇಶವನ್ನು ತನ್ನ ವಿಚಾರಧಾರೆಯಿಂದ ಹಾಳು ಮಾಡಲು ಬಂದಿದ್ದಾನೆ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಸಂಸತ್‌ನಲ್ಲಿ ಪ್ರಶ್ನೆ ಮಾಡಿದರೆ 56 ಇಂಚಿನ ಎದೆ ಬಗ್ಗೆ ಹೇಳುತ್ತಾರೆ. ನಾವು ಅವರ ದೇಹದಾರ್ಢ್ಯತೆ ಕೇಳುತ್ತಿಲ್ಲ. ಅವರು ಮಾಡಿರುವ ಜನಪರ, ಅಭಿವೃದ್ಧಿಪರ ಕೆಲಸಗಳನ್ನು ಅಳತೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನ ದಂಗೆ ಏಳುತ್ತಾರೆ ಎಂದು ಹೇಳುವ ಮೂಲಕ ಅಮಿತ್‌ ಶಾ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇಲ್ಲಿಯವರೆಗೆ ದಂಗೆಗಳು ನಡೆದಿರುವುದು ಗುಜರಾತ್‌ನಲ್ಲಿ ಮಾತ್ರ” ಎಂದು ತಿಳಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ರಾಷ್ಟ್ರಸೇವೆಯನ್ನೇ ತನ್ನ ಜೀವನದ ಪರಮ ಧ್ಯೇಯವನ್ನಾಗಿಸಿಕೊಂಡು ಶ್ರಮಿಸುತ್ತಿರುವ, ಹಿಂದುಳಿದ ಸಮುದಾಯದ ನರೇಂದ್ರಮೋದಿಯವರನ್ನು ‘ಮೌತ್ ಕಿ ಸೌದಾಗರ್’ ‘ರಾವಣ’, ‘ನೀಚ ವ್ಯಕ್ತಿ’ ಎಂದೆಲ್ಲಾ ನಿಂದಿಸಿ, ಇದೀಗ ಸೋಲುವ ಹತಾಶೆಯಿಂದ ಖರ್ಗೆಯವರು ವಿಷಸರ್ಪ ಎನ್ನುವ ಮೂಲಕ ಕಾಂಗ್ರೆ ಸ್‌ನ ವಿಕೃತ ಮನಸ್ಥಿತಿಯನ್ನು ಸ್ವಯಂ ಬಯಲು ಮಾಡಿದ್ದಾರೆೆ” ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

“ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ. ಖರ್ಗೆಯವರ ಹೇಳಿಕೆಗೆ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು” ಎಂದು ಕೇಂದ್ರ ಸಚಿವ ಅನುರಾಗ್ ಒತ್ತಾಯಿಸಿದ್ದಾರೆ.

ತಮ್ಮ ಹೇಳಿಕೆಗೆ ಖರ್ಗೆಯವರು ಸ್ಪಷ್ಟನೆಯನ್ನು ನೀಡಿದ್ದಾರೆ. “ಬಿಜೆಪಿ ಪಾರ್ಟಿ ಹಾವು ಇದ್ದ ಹಾಗೆ. ಸ್ವಲ್ಪ ನೆಕ್ಕಿ ನೋಡುತ್ತೇವೆ ಅಂದರೂ ಸಾವು ಖಚಿತ ಎಂಬರ್ಥದಲ್ಲಿ ಹೇಳಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಈ ಮಾತು ಹೇಳಿಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ” ಎಂದು ತಿಳಿಸಿದ್ದಾರೆ.

“ಬಿಜೆಪಿಯವರ ಮಾಡಿದ ಭ್ರಷ್ಟಚಾರಗಳು ಅಷ್ಟಿಷ್ಟಲ್ಲ. ಅವುಗಳ ಬಗ್ಗೆ ಹೇಳಿದರೆ ಇಡಿ, ಐಟಿ ಅಸ್ತ್ರಗಳನ್ನು ಬಳಕೆ ಮಾಡಿ ಹೆದರಿಸುವುದು ಸರ್ವೇ ಸಾಮಾನ್ಯವಾಗಿದೆ. ಆದ್ದರಿಂದ ಮೋದಿ ಸರ್ಕಾರ ಒಂದು ವಿಷಯುಕ್ತ ಹಾವಿನಂತಿದೆ. ಬಿಜೆಪಿ ಐಡಿಯಾಲಾಜಿ ವಿಷದಂತಿದೆ. ಅದನ್ನು ನೀವು ಬೆಂಬಲಿಸುತ್ತೇವೆ ಅಂದರೆ ಸಾವು ಖಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...