Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...