Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...