Homeಕರ್ನಾಟಕ'ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..'; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

‘ಮೋದಿ ದುರ್ಬಲ ಪ್ರಧಾನಮಂತ್ರಿಯಂತೆ, ಇವರು ಪ್ರಬಲ ಮುಖ್ಯಮಂತ್ರಿಯಂತೆ..’; ಸಿದ್ದರಾಮಯ್ಯ ವಿರುದ್ಧ ಎಚ್‌ಡಿಡಿ ವಾಗ್ದಾಳಿ

- Advertisement -
- Advertisement -

ಬೆಂಗಳೂರಿನಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ  ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.

ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿಟಿ ದೇವೇಗೌಡರಿಗೆ ನಿರ್ದೇಶನ ನೀಡಿದರು.

“ಮೈಸೂರು ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ಜಿ.ಟಿ.ದೇವೇಗೌಡರಿಗೆ ಇದೆ. ಸಿದ್ದರಾಮಯ್ಯ ಅವರ ಗರ್ವಭಂಗ ಆಗಲೇಬೇಕು. ಅವರ ಗರ್ವಭಂಗ ಆಗಬೇಕಾದರೆ ನಾವೆಲ್ಲರೂ ಛಲದಿಂದ ಒಟ್ಟಾಗಿ ಹೋಗಬೇಕು” ಎಂದು ವೇದಿಕೆಯಲ್ಲೇ ಹೇಳಿದರು.

‘ಮೈತ್ರಿಯಲ್ಲಿ ಎಲ್ಲಿಯೂ ಒಂದು ಸಣ್ಣ ಸಮಸ್ಯೆಯೂ ಕಾಣಿಸಿಕೊಳ್ಳಬಾರದು. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೂ ಬಿಡದೇ ಹೋರಾಟ ಮಾಡೋಣ. ಒಂದು ರಾಜ್ಯದ ಸಿಎಂ ಗಟ್ಟಿಯಾಗಿರಬೇಕಂತೆ, ದೇಶದ ಪ್ರಧಾನಿ ಬಹಳ ವೀಕ್ ಅಂತೆ.. ಅಬ್ಬಾ..! ಪ್ರಧಾನಿ ವಿರುದ್ಧವೇ ಕೋರ್ಟಿಗೆ ಹೋಗಿದ್ದಾರೆ.. ಎಂಥಾ ಜನ ಇವರು” ಎಂದು ಕರ್ನಾಟಕದ ಪಾಲಿನ ತೆರಿಗೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದರು.

ಮನಮೋಹನ್ ಸಿಂಗ್ ‘ನೊ..’ ಎಂದಿದ್ದರು

‘ರೈತರ ಸಾಲದ ಮೇಲೆ ಬಡ್ಡಿ ಮನ್ನ ಮಾಡಿ ಎಂದು ಕೇಳಿದರೆ, ಮನಮೋಹನ್ ಸಿಂಗ್ ಅವರು ನೋ ಎಂದರು. ಇದೆಲ್ಲಾ ಗೊತ್ತಿದ್ದರೂ ಸಿದ್ದರಾಮಯ್ಯ ಅವರೇ ಕೋರ್ಟಿಗೆ ಅರ್ಜಿ ಹಾಕ್ತೀರಾ? ಸ್ಟ್ರಾಂಗೆಸ್ಟ್ ಮುಖ್ಯಮಂತ್ರಿ, ವೀಕೆಸ್ಟ್ ಪ್ರಧಾನಮಂತ್ರಿ! ಇಂತಹ ಮುಖ್ಯಮಂತ್ರಿ ನಮ್ಮ ರಾಜ್ಯದಲ್ಲಿದ್ದಾರೆ. ಆ ಮಹಾನುಬಾವರಿಗೆ, ನಮೋ ನಮಃ ಎಂದು ಮಾಜಿ ಪ್ರಧಾನಿಗಳು ಲೇವಡಿ ಮಾಡಿದ್ದಾರೆ.

‘ಸಿದ್ದರಾಮಯ್ಯನವರು ಜೆಡಿಎಸ್ ಎಲ್ಲಿದೆ ಅಂತಾರೆ. ಅವರಿಗೆ ಅಧಿಕಾರದ ಮದ. ಆ ಮದ ಇಳಿಸುವ ಸಾಮರ್ಥ್ಯ 91ನೇ ವರ್ಷದ ಈ ದೇವೇಗೌಡನಿಗಿದೆ. ಯಾರ ಭಯಕ್ಕೂ ನಾನು ಅಂಜುವನಲ್ಲ. ಆ ಭಯ ಅನ್ನೋದೇ ನನಗಿಲ್ಲ. ನನ್ನ ತಲೆ ಎನ್‌ಸೈಕ್ಲೋಪೀಡಿಯಾ. ಯಾವಾಗ, ಏನೆಲ್ಲಾ ಘಟನೆ ನಡೆದಿದೆ ಎಲ್ಲವನ್ನೂ ಹೇಳಬಲ್ಲೆ. ಯಡಿಯೂರಪ್ಪ ಅವರೇ ನನಗೆ ಎಲ್ಲಾ ಗೊತ್ತು ಎಂದ ಅವರು; ತುಮಕೂರಿಗೆ ಕಳಿಸಿ, ನನ್ನನ್ನೇ ಸೋಲಿಸಿದರು. ಕಾಂಗ್ರೆಸ್ ನವರು ಏನು ಮಾಡಿದರು ಎನ್ನುವುದು ಗೊತ್ತಿದೆ’ ಎಂದರು.

ಎಐಸಿಸಿಗೆ ಹಣ ಸಂದಾಯವಾಗುತ್ತಿದೆ

ಕಾಂಗ್ರೆಸ್ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪ ಮಾಡಿದ ಗೌಡರು, “28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಣ ಬಲವನ್ನು ನಾವು ಎದುರಿಸಬೇಕಿದೆ. ಹೊರ ರಾಜ್ಯಗಳಿಗೂ ಕಾಂಗ್ರೆಸ್ ನವರು ಹಣ ಸರಬರಾಜು ಮಾಡ್ತಿದ್ದಾರೆ. ತೆಲಾಂಗಣ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಅಲ್ಲಿಗೆಲ್ಲ ರಾಜ್ಯದ ಹಣ ಹೋಗುತ್ತಿದೆ. ಕರ್ನಾಟಕದಿಂದ ಎಐಸಿಸಿಗೆ ಹಣ ಸಂದಾಯವಾಗುತ್ತಿದೆ’ ಎಂದು ಗಂಭೀರ ಆರೋಪ ಮಾಡಿದರು.

‘ಎರಡು ಪಕ್ಷಗಳ ಸಮನ್ವಯ ಸಮಿತಿ ಸಭೆ ನಡೆಯುತ್ತಿರುವುದು ಸಂತೋಷದಾಯಕ. ಭಾರತ ಮಾತೆ ಹಾಗೂ ಶ್ಯಾಮ್ ಪ್ರಕಾಶ್ ಮುಖರ್ಜಿ, ದೀನ್ ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಅರ್ಪಿಸಿ ವೇದಿಕೆಗೆ ಬಂದಿದ್ದೇನೆ. ರಾಜ್ಯ ಉಸ್ತುವಾರಿ ರಾಧಮೋಹನ್ ದಾಸ್ ಎಲ್ಲಾ ಕ್ಷೇತ್ರಗಳ ಮಾಹಿತಿ ಪಡೆದಿದ್ದಾರೆ. ಎಲ್ಲಾ ಮಾಹಿತಿಯನ್ನ ಬಿಜೆಪಿ ವರಿಷ್ಠರಿಗೆ ನೀಡ್ತಿದ್ದಾರೆ. ಎರಡು ಪಕ್ಷದಲ್ಲಿ ಸಮನ್ವಯ ಸಾಧಿಸಬೇಕು. ಯಡಿಯೂರಪ್ಪ ಅವರ ಪಾತ್ರ ಬಹಳ ಮುಖ್ಯವಾಗಿದೆ. ಸಮಯ ತುಂಬಾ ಕಡಿಮೆ ಇದೆ. ಹಿಂದೆ ಆದಂತಹ ವಿಚಾರಗಳನ್ನ ಮರೆತು ನಾವೆಲ್ಲಾ ಒಂದಾಗಬೇಕಿದೆ. ಕಾರ್ಯಕರ್ತರು ಕೆಲಸ ಮಾಡಬೇಕಿದೆ’ ಎಂದು ಮನವಿ ಮಾಡಿದರು.

ಇದನ್ನೂ ಓದಿ; ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...