Homeಮುಖಪುಟ‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ’ ಎಂದು ದೇಶದ ಸೆಲೆಬ್ರಿಟಿಗಳನ್ನು ಹಲವು ಮಂದಿ ಟ್ಯಾಗ್ ಮಾಡಿ ವ್ಯಂಗ್ಯವಾಗಿಡಿದ್ದಾರೆ.

- Advertisement -
- Advertisement -

ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿರುವ ಅಮೆರಿಕಾದ ಟೆನಿಸ್ ದಂತಕಥೆ ಮಾರ್ಟಿನಾ ನವ್ರಾತಿಲೋವಾ ಅವರು, ಭಾನುವಾರದಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ಮೋದಿಯನ್ನು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ರಾಜಕೀಯ ಜೀವನದ 20 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರು ಸಂಸದ್‌ ಟಿವಿಗೆ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದ ಸಮಯದಲ್ಲಿ, ‘‘ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ. ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ” ಎಂದು ಹೇಳಿದ್ದರು.

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ಅಮಿತ್‌ ಶಾ ಅವರ ಹೇಳಿಕೆಯನ್ನು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿತ್ತು. ಈ ವರದಿಯನ್ನು ಟ್ವೀಟ್ ಮಾಡಿದ್ದ ಹಿಂದೂಸ್ತಾನ್ ಟೈಮ್ಸ್‌, “ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ, ಬದಲಾಗಿ ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ” ಎಂದು ಬರೆದಿತ್ತು.

ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಮಾರ್ಟಿನಾ ಅವರು, “ಇದು ನನ್ನ ಮುಂದಿನ ಜೋಕ್‌ಗೆ…” ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ತಮ್ಮ ಟ್ವೀಟ್‌ನೊಂದಿಗೆ ಆಶ್ಚರ್ಯ ಮತ್ತು ಭಾವೋದ್ರೇಕವನ್ನು ಬಿಂಬಿಸುವ ಇಮೋಜಿಗಳನ್ನು ಸೇರಿಸಿದ್ದಾರೆ.

ಮಾರ್ಟಿನಾ ಅವರ ಟ್ವೀಟ್ ಭಾತರದ ನೆಟ್ಟಿಗರಲ್ಲಿ ಸಂಚಲನ ಉಂಟು ಮಾಡಿದ್ದು, ಹಲವಾರು ಜನರು ಧನ್ಯವಾದ ಸಲ್ಲಿಸಿದ್ದಾರೆ. ಹಲವು ಜನರು ಭಾತರದ ಬಲಪಂಥೀಯರು ಅವರ ಮೇಲೆ ಮುಗಿಬೀಳುತ್ತಾರೆ ಎಂದು ಕೂಡಾ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಹಿಂದೆ ರೈತ ಹೋರಾಟವನ್ನು ಬೆಂಬಲಿಸಿದ್ದ ಪಾಪ್‌ ತಾರೆ ರಿಹಾನ್ನ ಅವರ ಜೊತೆಗೆ ದೇಶದ ಬಲಪಂಥೀಯರು ನಡೆದುಕೊಂಡದ್ದನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಒಕ್ಕೂಟ ಸರ್ಕಾರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ಇನ್ನೂ ಕೆಲವರು, ದೇಶದ ಸೆಲೆಬ್ರಿಟಿಗಳಾದ ಸಚಿನ್, ವಿರಾಟ್ ಕೋಯ್ಲಿ, ಸೈನಾ ನೆಹ್ವಾಲ್, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌ ಕಂಗನಾ ರಣಾವತ್‌ ಸೇರಿದಂತೆ ಹಲವಾರು ಜನರನ್ನು ಟ್ಯಾಗ್ ಮಾಡಿ, “ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ” ಎಂದು ಟ್ವೀಟ್ ಮಾಡಿದ್ದಾರೆ.

ಪಾಪ್‌ ತಾರೆ ರಿಹಾನ್ನ ಅವರು ರೈತರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾಗ, ಬಿಜೆಪಿ ಐಟಿ ಸೆಲ್‌ ನೀಡಿದ್ದ ಸಂದೇಶವನ್ನು ದೇಶದ ಹಲವಾರು ಜನಪ್ರಿಯ ವ್ಯಕ್ತಿಗಳು ಕಾಪಿ ಪೇಸ್ಟ್‌ ಮಾಡಿ, ಹೊರದೇಶದವರು ನಮ್ಮ ದೇಶದ ಆಂತರಿಕ ವಿಷಯಗಳನ್ನು ತಲೆ ಹಾಕಬಾರದು ಎಂದು ಟ್ವೀಟ್ ಮಾಡಿದ್ದರು. ನಂತರ ಈ ಟ್ವೀಟ್‌ಗಳೆಲ್ಲವೂ ಒಂದೇ ಮಾದರಿಯಲ್ಲಿ ಇದ್ದಿದ್ದನ್ನು ಗುರುತಿಸಿದ್ದ ನೆಟ್ಟಿಗರು ಅವರಿಗೆ ಛೀಮಾರಿ ಹಾಕಿದ್ದರು.

ತನ್ನ ಟ್ವಿಟರ್ ಬಯೋದಲ್ಲಿ “ಈಗ ಮಾತನಾಡುವ ಸಮಯ” ಎಂದು ಬರೆದಿರುವ ಮಾರ್ಟಿನಾ, ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿದ್ದಾರೆ. 2016 ರಲ್ಲಿ, ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕುರಿತ ಲೇಖನವನ್ನು ಅವರು ಹಂಚಿಕೊಂಡಿದ್ದರು. ಈ ವೇಳೆ ಅವರ ಮೇಲೆ ಭಾರತೀಯ ಬಲಪಂಥೀಯರು ಮುಗಿಬಿದ್ದಿದ್ದರು. 2019 ರಲ್ಲಿ ಕೂಡಾ ಮೋದಿ ಮತ್ತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅವರು ದಾಳಿ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಇದನ್ನೂ ಓದಿ: ‘ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...